ಬ್ರೇಕಿಂಗ್ ನ್ಯೂಸ್
16-12-22 10:34 pm HK News Desk ಕರ್ನಾಟಕ
ಬೆಳಗಾವಿ, ಡಿ 16: ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿ ತಿಂಗಳಿನಲ್ಲಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಒಂದು ದಿನದ ಭೇಟಿಗಾಗಿ ಅವರು ರಾಜ್ಯಕ್ಕೆ ಬರಲಿದ್ದಾರೆ.
ಎರಡು ದಿನಗಳ 'ರಾಷ್ಟ್ರೀಯ ಯುವಜನೋತ್ಸವ' ಉದ್ಘಾಟನೆಗೆ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ.
ಕೇಂದ್ರ ಸರ್ಕಾರ ಸ್ವಾಮಿ ವಿವೇಕಾನಂದ ಜನ್ಮದಿನ ಜನವರಿ 12 ಅನ್ನು ರಾಷ್ಟ್ರೀಯ ಯುವ ದಿನವಾಗಿ ಘೋಷಣೆ ಮಾಡಿದೆ. ಈ ಅಂಗವಾಗಿ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದನ್ನು ಮೋದಿ ಉದ್ಘಾಟಿಸಲಿದ್ದಾರೆ.

ಬೆಳಗಾವಿಯ ನೆಹರೂ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದೆ. ದೇಶದ ವಿವಿಧ ರಾಜ್ಯಗಳಿಂದ ಆಗಮಿಸುವ ಸುಮಾರು 6 ಸಾವಿರಕ್ಕೂ ಹೆಚ್ಚು ಯುವಕ/ ಯುವತಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ಪುಸ್ತಕ ಮೇಳವನ್ನು ಸಹ ಸಿಪಿಇಡಿ ಕ್ರೀಡಾಂಗಣ, ಸರ್ದಾರ್ ಹೈಸ್ಕೂಲ್ ಆವರಣದಲ್ಲಿ ಆಯೋಜನೆ ಮಾಡಲಾಗಿದೆ. ನಗರಕ್ಕೆ ಆಗಮಿಸುವ ಗಣ್ಯರಿಗಾಗಿ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ.
ಪ್ರತಿ ವರ್ಷ ಒಂದು ರಾಜ್ಯದಲ್ಲಿ ಆಯೋಜನೆ; ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಪ್ರತಿ ವರ್ಷ ಒದೊಂದು ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವವನ್ನು ಜನವರಿ 12ರಂದು ಆಯೋಜನೆ ಮಾಡುತ್ತದೆ.
ಕೇಂದ್ರ ಸರ್ಕಾರ ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ 12 ಅನ್ನು ರಾಷ್ಟ್ರೀಯ ಯುವ ದಿನವಾಗಿ ಘೋಷಣೆ ಮಾಡಿದೆ. ರಾಷ್ಟ್ರೀಯ ಯುವಜನೋತ್ಸವಗಳನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸುತ್ತಾರೆ. ಈ ಬಾರಿ ಕರ್ನಾಟಕದ ಬೆಳಗಾವಿಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ.
ರಾಷ್ಟ್ರೀಯ ಯುವಜನೋತ್ಸವದ ಮೂಲಕ ದೇಶದ ಯುವಕರನ್ನು ಒಟ್ಟುಗೂಡಿಸುವುದು, ಯುವಕರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುವುದು ಉದ್ದೇಶವಾಗಿದೆ. ಯುವಜನರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅನನ್ಯತೆಯ ವಿನಿಮಯಕ್ಕೆ ಇದು ವೇದಿಕೆಯಾಗಿದೆ.
Prime Minister Narendra Modi will be in Belagavi on 12th January to inaugurate two day National Youth Conference at District Stadium Belagavi.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm