ಬ್ರೇಕಿಂಗ್ ನ್ಯೂಸ್
16-12-22 10:34 pm HK News Desk ಕರ್ನಾಟಕ
ಬೆಳಗಾವಿ, ಡಿ 16: ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿ ತಿಂಗಳಿನಲ್ಲಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಒಂದು ದಿನದ ಭೇಟಿಗಾಗಿ ಅವರು ರಾಜ್ಯಕ್ಕೆ ಬರಲಿದ್ದಾರೆ.
ಎರಡು ದಿನಗಳ 'ರಾಷ್ಟ್ರೀಯ ಯುವಜನೋತ್ಸವ' ಉದ್ಘಾಟನೆಗೆ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ.
ಕೇಂದ್ರ ಸರ್ಕಾರ ಸ್ವಾಮಿ ವಿವೇಕಾನಂದ ಜನ್ಮದಿನ ಜನವರಿ 12 ಅನ್ನು ರಾಷ್ಟ್ರೀಯ ಯುವ ದಿನವಾಗಿ ಘೋಷಣೆ ಮಾಡಿದೆ. ಈ ಅಂಗವಾಗಿ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದನ್ನು ಮೋದಿ ಉದ್ಘಾಟಿಸಲಿದ್ದಾರೆ.

ಬೆಳಗಾವಿಯ ನೆಹರೂ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದೆ. ದೇಶದ ವಿವಿಧ ರಾಜ್ಯಗಳಿಂದ ಆಗಮಿಸುವ ಸುಮಾರು 6 ಸಾವಿರಕ್ಕೂ ಹೆಚ್ಚು ಯುವಕ/ ಯುವತಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ಪುಸ್ತಕ ಮೇಳವನ್ನು ಸಹ ಸಿಪಿಇಡಿ ಕ್ರೀಡಾಂಗಣ, ಸರ್ದಾರ್ ಹೈಸ್ಕೂಲ್ ಆವರಣದಲ್ಲಿ ಆಯೋಜನೆ ಮಾಡಲಾಗಿದೆ. ನಗರಕ್ಕೆ ಆಗಮಿಸುವ ಗಣ್ಯರಿಗಾಗಿ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ.
ಪ್ರತಿ ವರ್ಷ ಒಂದು ರಾಜ್ಯದಲ್ಲಿ ಆಯೋಜನೆ; ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಪ್ರತಿ ವರ್ಷ ಒದೊಂದು ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವವನ್ನು ಜನವರಿ 12ರಂದು ಆಯೋಜನೆ ಮಾಡುತ್ತದೆ.
ಕೇಂದ್ರ ಸರ್ಕಾರ ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ 12 ಅನ್ನು ರಾಷ್ಟ್ರೀಯ ಯುವ ದಿನವಾಗಿ ಘೋಷಣೆ ಮಾಡಿದೆ. ರಾಷ್ಟ್ರೀಯ ಯುವಜನೋತ್ಸವಗಳನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸುತ್ತಾರೆ. ಈ ಬಾರಿ ಕರ್ನಾಟಕದ ಬೆಳಗಾವಿಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ.
ರಾಷ್ಟ್ರೀಯ ಯುವಜನೋತ್ಸವದ ಮೂಲಕ ದೇಶದ ಯುವಕರನ್ನು ಒಟ್ಟುಗೂಡಿಸುವುದು, ಯುವಕರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುವುದು ಉದ್ದೇಶವಾಗಿದೆ. ಯುವಜನರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅನನ್ಯತೆಯ ವಿನಿಮಯಕ್ಕೆ ಇದು ವೇದಿಕೆಯಾಗಿದೆ.
Prime Minister Narendra Modi will be in Belagavi on 12th January to inaugurate two day National Youth Conference at District Stadium Belagavi.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm