ಬ್ರೇಕಿಂಗ್ ನ್ಯೂಸ್
19-12-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.19: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ದಾಳಿ ನಡೆದಿದೆ ಅಂತ ತಿಳಿದು ಬಂದಿದೆ.
ಸದ್ಯ ಡಿಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಹಿಸಿದ್ದಾರೆ.
ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನುವುದು ತಿಳಿದು ಬಂದಿದೆ. ಈ ಹಿಂದೆ ಕೂಡ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ಅವರನ್ನು ಸದ್ಯ ವಿಚಾರಣೆ ನಡೆಸುತ್ತಿದೆ. ಡಿಕೆ ಶಿವಕುಮಾರ್ ಅವರು ಸಂಸ್ಥೆಯ ಚೇರ್ಮನ್ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯದರ್ಶಿಯಾಗಿ ಆಗಿದ್ದಾರೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನುವ ಮಾಹಿತಿ ಪ್ರಾಥಮಿಕ ಸುದ್ದಿ ಮೂಲಗಳಿಂದ ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಮಾಧ್ಯಮಗಳ ಜೊತೆಗೆ ಸುದ್ದಿಗಾರರ ಜೊತೆಗೆ ಕೊಪ್ಪಳದಲ್ಲಿ ಮಾತನಾಡುತ್ತ ಚುನಾವಣೆ ಹಿನ್ನಲೆಯಲ್ಲಿ ನನಗೆ ಸೇರಿದಂಥೆ ಹಲವರಿಗೆ ತೊಂದ್ರೆ ಕೊಡುತ್ತಿದೆ ಅಂತ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ದಾಳಿ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಡಿಕೆ ಶಿವಕುಮಾರ್ ಅವರು, ಇಂದು ದಾಳಿ ವೇಳೆಯಲ್ಲಿ ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬಂಧಪಟ್ಟಂತೆ ನೋಟಿಸ್ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಸುತ್ತು ಹಾಕಿ ತಹಶಿಲ್ದಾರ್ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ನನ್ನ ವಿರುದ್ದ ಕೇಸ್ಗಳು ನಡೆಯುತ್ತಿದ್ದು, ಎಲ್ಲಾ ಕಡೆಯಿಂದ ನನಗೆ ತೊಂದ್ರೆ ನೀಡುತ್ತಿದ್ದಾರೆ ಅಂತ ಕಿಡಿಕಾರಿದರು. ಇದಲ್ಲದೇ ನನಗೆ ಯಾವುದೇ ಭಯವಿಲ್ಲ, ನಾನು ತಪ್ಪು ಮಾಡಿಲ್ಲ. ಹೆಚ್ ವಿಶ್ವನಾಥ್ ಬಗ್ಗೆ ಇತ್ತೀಚಿವೆ ಹಣಕಾಸಿನ ಬಗ್ಗೆ ರಾಜರೋಶವಾಗಿ ಹೇಳಿದ್ದರು ಕೂಡ ಯಾರು ಈ ಬಗ್ಗೆ ಮಾತನಾಡಿಲ್ಲ. ಇದಲ್ಲದೇ ವಿರೋಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮುಂದಾಗಿದ್ದು, ಈ ಬಗ್ಗೆ ನ್ಯಾಯಾಲಯ ಜನತೆಗಳ ಜೊತೆಗೆ ನಾವು ಹೋಗುತ್ತೆವೆ ಅಂತ ಹೇಳಿದರು.
The sleuths of Central Bureau of Investigation (CBI) on Monday conducted raids on educational institution owned by Karnataka Congress President D.K. Shivakumar in Bengaluru. The sleuths raided the National Education Foundation located in Rajarajeshwarinagar in Bengaluru and conducted verification of documents. Shivakumar is the chairman of the foundation and his daughter Ishwarya is the secretary.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm