ಬ್ರೇಕಿಂಗ್ ನ್ಯೂಸ್
23-12-22 02:37 pm HK News Desk ಕರ್ನಾಟಕ
ಬೆಂಗಳೂರು, ಡಿ.23: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ತುರ್ತು ಸಭೆ ನಡೆಸಿದ್ದು ಮಹತ್ವದ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಕೋವಿಡ್-19 ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಕ್ರಮಗಳನ್ನು ಪ್ರಕಟಿಸಲಾಗಿದೆ. ಅದರಂತೆ ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಕೋವಿಡ್ ಲಕ್ಷಣವುಳ್ಳ ಪ್ರಕರಣಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಕೋವಿಡ್ ಲಕ್ಷಣ ಹೊಂದಿದವರಿಗೆ ಹಾಗೂ ಖಚಿತ ಪ್ರಕರಣಗಳ ಸಂಪರ್ಕಿತರು ಕೋವಿಡ್ ಪರೀಕ್ಷೆಗೆ ಒಳಪಡುವುದನ್ನು ಖಚಿತಪಡಿಸಿಕೊಳ್ಳಬೇಕು. ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಪರೀಕ್ಷೆ ಒಳಪಡಿಸಲು ಅಗತ್ಯ ಸಂಖ್ಯೆಯ ಟೀಂಗಳನ್ನು ಬಿಬಿಎಂಪಿ ಹಾಗೂ ಜಿಲ್ಲೆಗಳು ಕಾರ್ಯೋನ್ಮುಖಗೊಳಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣ ಹಾಗೂ ಮಂಗಳೂರು ವಿಮಾನ ನಿಲ್ದಾಣಗಳಲ್ಲಿ, ಅಂತರ ರಾಷ್ಟ್ರೀಯ ಪ್ರಯಾಣಿಕರ ಪೈಕಿ ಶೇ.2 ಅಂದರೆ ನಿರ್ದಿಷ್ಟ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ. ಜೊತೆಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವಂತೆ ಹೇಳಿದೆ.
ಎಲ್ಲಾ ಕೋವಿಡ್-19 ಪಾಸಿಟಿವ್ ಫಲಿತಾಂಶ ಬಂದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಡ್ಡಾಯವಾಗಿ ಕಳುಹಿಸಬೇಕು. ಕೋವಿಡ್ ಹೆಚ್ಚಳದ ಕಾರಣ ಎಲ್ಲಾ ಹಂತಗಳಲ್ಲೂ ಲಸಿಕಾಕರಣದ ಕ್ಯಾಂಪ್ ಆಯೋಜಿಸುವಂತೆ ತಿಳಿಸಿದೆ.
ಸಾರ್ವಜನಿಕರು ಹಾಗೂ ಸಭೆ, ಸಮಾರಂಭಗಳ ಆಯೋಜಕರಿಗೂ ಕೋವಿಡ್ ನಿಯಂತ್ರಣ ಸಲಹೆಯನ್ನು ಮಾಡಲಾಗಿದ್ದು ಮುಚ್ಚಿದ ಕೋಣೆಯ ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್, ಶಾಪಿಂಗ್ ಮಾಲ್, ಕಚೇರಿ ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ.
ಅರ್ಹರೆಲ್ಲರೂ ಕೋವಿಡ್ ಲಸಿಕೆಯ ಫ್ರಿಕಾಶನರಿ ಡೋಸ್ ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟ ಸಮಸ್ಯೆ ಇರೋರು, ಕೋವಿಡ್ ಸೋಂಕಿನ ಲಕ್ಷಣ ಹೊಂದಿರೋರು, ಸ್ವಯಂ ಪ್ರತ್ಯೇಕವಾಗಿದ್ದು, ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ಮಾಡಿದೆ.
ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದಲ್ಲದೇ, ದೈಹಿಕ ಅಂತರವನ್ನು ಪಾಲಿಸುವಂತೆ ತಿಳಿಸಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಹೇಳಿದೆ.
The Karnataka government on Thursday decided to conduct mandatory testing of Influenza Like Illness (ILI) and Severe Acute Respiratory Illness (SARI) in the state amid a spurt in COVID-19 cases in some parts of the world, including China.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm