ಬ್ರೇಕಿಂಗ್ ನ್ಯೂಸ್
25-12-22 01:33 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.25 : ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಬಗ್ಗೆ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್ಸಿಎ) ಅಧ್ಯಕ್ಷ ಡಿ. ಕೆಂಪಣ್ಣ ಮತ್ತು ಇತರ ಐವರನ್ನು ವೈಯಾಲಿಕಾವಲ್ ಪೊಲೀಸರು ಮಾನನಷ್ಟ ಪ್ರಕರಣದಲ್ಲಿ ಬಂಧಿಸಿದ್ದು ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.
ಕಾಮಗಾರಿ ಟೆಂಡರ್ ನೀಡಲು ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ಕೇಳುತ್ತಾರೆ ಎಂಬ ಆರೋಪದ ವಿರುದ್ಧ ತೋಟಗಾರಿಕಾ ಸಚಿವ ಎನ್. ಮುನಿರತ್ನ ಅವರು ಕೆಂಪಣ್ಣ ಹಾಗೂ ಗುತ್ತಿಗೆದಾರರ ಸಂಘದ ಇತರ 18 ಸದಸ್ಯರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮುನಿರತ್ನ ಅವರು 50 ಕೋಟಿ ರೂ. ಪರಿಹಾರ ನೀಡುವಂತೆ ಕೋರಿ ಸೆಪ್ಟೆಂಬರ್ 1ರಂದು ಸಂಘಕ್ಕೆ ನೋಟಿಸ್ ಕಳುಹಿಸಿದ್ದರು.
ನೋಟಿಸ್ಗೆ ಉತ್ತರಿಸಲು ಮತ್ತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಲು ಅಥವಾ ತಮ್ಮ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯವನ್ನು ನೀಡುವಂತೆ ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘಕ್ಕೆ ಅಂತಿಮ ಗಡುವು ನೀಡಿದ್ದರು. ಸಂಘವು ತನ್ನ ಯಾವುದೇ ಷರತ್ತುಗಳನ್ನು ಪೂರೈಸದ ಹಿನ್ನೆಲೆಯಲ್ಲಿ ಸಚಿವರು ವಿಚಾರಣಾ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಮುನಿರತ್ನ ಅವರು ತನ್ನ ವಿರುದ್ಧ ಕೆಎಸ್ಸಿಎ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ತಡೆಯಾಜ್ಞೆ ಆದೇಶವನ್ನೂ ತಂದಿದ್ದರು.
ವಾರಂಟ್ ನೋಟಿಸ್ ಮಾಡಿದ್ದರೂ ವಿಚಾರಣೆಗೆ ಹಾಜರಾಗದ್ದಕ್ಕೆ 8ನೇ ಎಸಿಎಂಎಂ ನ್ಯಾಯಾಲಯ ಕೆಂಪಣ್ಣ ಹಾಗೂ ಇತರರ ವಿರುದ್ಧ ಡಿ.19ರಂದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ವೈಯಾಲಿಕಾವಲ್ ಪೊಲೀಸರು ಕೆಂಪಣ್ಣ, ನಟರಾಜ್, ಕೃಷ್ಣಾ ರೆಡ್ಡಿ, ಗುರುಸಿದ್ದಪ್ಪ ಎಂಬವರನ್ನು ಬಂಧಿಸಿದ್ದು ಶನಿವಾರ ರಾತ್ರಿ ಜಡ್ಜ್ ನಿವಾಸದಲ್ಲಿ ಹಾಜರು ಪಡಿಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪದ್ದಲ್ಲದ ಕಾರಣ ನ್ಯಾಯಾಧೀಶರು ಸ್ಥಳದಲ್ಲೇ ಜಾಮೀನು ನೀಡಿದ್ದಾರೆ. ಅಲ್ಲದೆ, ಸೋಮವಾರ ಕೋರ್ಟಿನಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
The Karnataka police arrested the contractor association president D Kempanna following a court order on Saturday. The development resulted from a defamation case filed by the Horticulture Minister Munirathna against Kempanna after he alleged that the minister took a bribe.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm