ಬ್ರೇಕಿಂಗ್ ನ್ಯೂಸ್
25-12-22 03:53 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26 : ಗಣಿ ಧಣಿ ಜನಾರ್ದದನ ರೆಡ್ಡಿ ಕಡೆಗೂ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಲ್ಲದೆ, ಚುನಾವಣೆ ಹೊತ್ತಲ್ಲಿ ಬಿಜೆಪಿಗೇ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ. ಬೆಂಗಳೂರಿನ ತನ್ನ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಸುದೀರ್ಘವಾಗಿ ಮಾತನಾಡಿ, ರಾಜಕೀಯದ ಒಳ ಹೊರಗನ್ನು ತೆರೆದಿಟ್ಟಿದ್ದಾರೆ.
ಬಸವಣ್ಣ ಹಾದಿಯಲ್ಲಿ ನಡೆಯಲು ಸಂಕಲ್ಪ ಮಾಡಿದ್ದೇನೆ. ಜಾತಿ, ಮತ, ಬೇಧ ಇಲ್ಲದೇ ಕೆಲಸ ಮಾಡಬೇಕು ಅಂತ ನಿರ್ಧರಿಸಿದ್ದೇನೆ. ಬಸವಣ್ಣನ ಸ್ಮರಣೆ ಮಾಡುತ್ತಾ ಸಾರ್ವಜನಿಕ ಬದುಕಿಗೆ ಬರುತ್ತಿದ್ದೇನೆ. ಬಿಜೆಪಿ ಜೊತೆ ನಾನು ಬಾಂಧವ್ಯವನ್ನು ಕಡಿದುಕೊಳ್ಳುತ್ತಿದ್ದೇನೆ. ಈ ಕಾರಣಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ನಿರ್ಮಾಣ ಮಾಡ್ತಿದ್ದೇನೆ ಎಂದು ರೆಡ್ಡಿ ಹೇಳಿದರು.

ನನ್ನ ಜೊತೆ ತನ್ನ ಆಪ್ತ ಗೆಳೆಯ ಶ್ರೀರಾಮುಲು ಅವರಿಗೆ ಬರುವಂತೆ ಹೇಳಿಲ್ಲ. ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಮುಂದಿನ ದಿನಗಳಲ್ಲಿ ನನ್ನ ಪತ್ನಿ ಅರುಣಾ ಲಕ್ಷ್ಮಿ ಅವರು ಸಹ ಪಕ್ಷ ಸಂಘಟನೆಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುತ್ತೇನೆ. ಕರ್ನಾಟಕ ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ. ಇಡೀ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುತ್ತೇನೆ ಎಂದರು.
ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಖಚಿತ
ಹೊಸ ಪಕ್ಷವನ್ನು ಘೋಷಿಸಿದ ಜನಾರ್ದನ ರೆಡ್ಡಿ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ದಿಸುವುದನ್ನು ಖಚಿತಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಗಂಗಾವತಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಅಲ್ಲದೆ, ಯಾವೆಲ್ಲ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಇಳಿಸುತ್ತೇನೆಂದು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದರು.

ನನ್ನ ಕಷ್ಟದ ದಿನಗಳಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಮಾತ್ರ ನಮ್ಮ ಕುಟುಂಬವನ್ನು ಸಂತೈಸಿದ್ದು. ಬೇರೆ ಯಾರೂ ಹತ್ತಿರ ಬಂದಿರಲಿಲ್ಲ. ಆಗ ನಮ್ಮವರು ಯಾರು ಎಂದು ಅರಿವಾಯಿತು. 2018ರಲ್ಲಿ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಅಮಿತ್ ಶಾ, ಬಿಜೆಪಿಗೂ ಜನಾರ್ದನ ರೆಡ್ಡಿಗೂ ಸಂಬಂಧ ಇಲ್ಲ ಎಂದಿದ್ದರು. ಮನೆಯಲ್ಲಿ ಕುಳಿತು ಅದನ್ನು ನೋಡಿದೆ. ನನಗೆ ಮತ್ತು ನನ್ನ ಹೆಂಡತಿಗೆ ಅದನ್ನು ಕೇಳಿ ತೀವ್ರ ಬೇಸರವಾಯಿತು. ಎರಡು ದಿನಗಳ ನಂತರ ದೆಹಲಿಯಿಂದ ಕರೆ ಬಂತು. ‘ನಾನು ಆ ಹೇಳಿಕೆ ಕೊಡಬಾರದಿತ್ತು. ನನ್ನ ಹೇಳಿಕೆಯಿಂದ ಸಾಕಷ್ಟು ಡ್ಯಾಮೇಜ್ ಆಗಿದೆ. ಆದ್ರೆ ನಾನು ನಿಮ್ಮನ್ನ ಪಕ್ಷಕ್ಕೆ ಬರೋಕೆ ಹೇಳಿದ್ರೆ ತಪ್ಪಾಗುತ್ತೆ. ಆದರೆ ನೀವು ಶೀರಾಮುಲು ಜೊತೆ ನಿಲ್ಲಬೇಕು. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡೋಣ ಎಂದರು. ಆಗ ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಮಾತುಕೊಟ್ಟು ಬಂದಿದ್ದೆ ಎಂದು ನೆನಪಿಸಿಕೊಂಡರು.
ಶ್ರೀರಾಮುಲು ಅವರನ್ನು ನಾವು ಮನೆ ಮಗನ ಹಾಗೇ ನೋಡಿದ್ದೀವಿ. ರಾಮುಲು ಈಗ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಅವರನ್ನು ಅಧಿಕಾರ ತ್ಯಜಿಸಿ ನನ್ನ ಪಕ್ಷಕ್ಕೆ ಬನ್ನಿ ಎಂದು ನಾನು ಹೇಳಲಾರೆ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು. ಮುಂದಿನ ದಿನಗಳಲ್ಲಿ ನನ್ನ ಪತ್ನಿಯೂ ನನ್ನ ಜೊತೆಗೆ ಇರುತ್ತಾರೆ. ಸಾರ್ವಜನಿಕ ಬದುಕಿನಲ್ಲಿ ಗುರುತಿಸಿಕೊಳ್ಳುತ್ತಾರೆ. ಸರ್ಕಾರ ನನ್ನನ್ನು ಹಿಂದೆಯೂ ಟಾರ್ಗೆಟ್ ಮಾಡಿದೆ, ಮುಂದೆಯೂ ಟಾರ್ಗೆಟ್ ಮಾಡಲಿದೆ ಎಂದು ವಿಶ್ಲೇಷಿಸಿದರು. ಪಕ್ಷದ ಪ್ರಣಾಳಿಕೆಯನ್ನು ಶೀಘ್ರ ಘೋಷಿಸುತ್ತೇನೆ ಎಂದರು.
ಬಿಜೆಪಿ ನಾಯಕರನ್ನು ನಾನು ಸಂಪರ್ಕಿಸಲು ಯತ್ನಿಸಿದ್ದು ನಿಜ. ಆದರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಸುಮ್ಮನಾದೆ. ಆದರೆ ಮಾಧ್ಯಮಗಳಲ್ಲಿ ಬಿಜೆಪಿಯ ಕದ ತಟ್ಟುತ್ತಿರುವ ರೆಡ್ಡಿ ಎಂಬ ವರದಿಗಳು ಪ್ರಕಟವಾದವು. ನಾನು ಆತ್ಮಾಭಿಮಾನ ಇರುವ ವ್ಯಕ್ತಿ. ಎಂದಿಗೂ ಅಂಥ ಕೆಲಸ ಮಾಡಲಿಲ್ಲ ಎಂದು ಹೇಳಿದರು.
Karnataka mining baron and former Bharatiya Janata Party (BJP) leader Gali Janardhan Reddy, who has been caught in controversies in the past, floated his own party – Kalyana Rajya Pragati Paksha – on Sunday. Reddy also announced that he will contest from Gangavati constituency in upcoming assembly elections.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm