ಬ್ರೇಕಿಂಗ್ ನ್ಯೂಸ್
26-12-22 10:27 pm HK News Desk ಕರ್ನಾಟಕ
ಹಾಸನ, ಡಿ.26 : ಹಾಸನದ ಕೊರಿಯರ್ ಶಾಪ್ ನಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿಯೊಂದು ಬ್ಲಾಸ್ಟ್ ಆಗಿದ್ದು ಕಚೇರಿಯಲ್ಲಿದ್ದ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ಫೋಟ ನಡೆದಿರುವುದು ಆತಂಕ ಮೂಡಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಗೆ ಮಿಕ್ಸಿ ಪಾರ್ಸಲ್ ಬಂದಿದ್ದು, ಅದನ್ನು ಹಾಸನ ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಲಾಗಿತ್ತು. ಆದರೆ ಎರಡು ದಿನಗಳ ಬಳಿಕ ಮಿಕ್ಸಿ ಸೂಕ್ತ ವಿಳಾಸದಿಂದ ಬಂದಿಲ್ಲ ಎಂದು ಕೊರಿಯರ್ ಕಚೇರಿಗೆ ವ್ಯಕ್ತಿ ಬಾಕ್ಸನ್ನು ವಾಪಸ್ ನೀಡಿದ್ದರು. ವಾಪಸ್ ಪಡೆಯುವ ವೇಳೆ ಮಿಕ್ಸಿಯನ್ನು ಕೊರಿಯರ್ ಕಚೇರಿಯ ಶಶಿ ಎಂಬವರು ಆನ್ ಮಾಡಿ ಪರಿಶೀಲನೆ ನಡೆಸಿದ್ದು ಆನ್ ಮಾಡಿದ ಬೆನ್ನಲ್ಲೇ ಮಿಕ್ಸಿ ಬ್ಲಾಸ್ಟ್ ಆಗಿದ್ದು ಸ್ಫೋಟದ ತೀವ್ರತೆಗೆ ಕೊರಿಯರ್ ಕಚೇರಿಯ ಗ್ಲಾಸ್ ಪುಡಿ ಪುಡಿಯಾಗಿದೆ. ಗೋಡೆಗೂ ಹಾನಿಯಾಗಿದೆ.





ಹಾಸನ ನಗರದ ಕೆ.ಆರ್ ಪುರಂನ ಸಬ್ ರಿಜಿಸ್ಟ್ರಾರ್ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶಂಕಾಸ್ಪದ ಬ್ಲಾಸ್ಟ್ ವದಂತಿಗಳು ಹರಡುತ್ತಿವೆ. ಕೊರಿಯರ್ ಶಾಪ್ ಸಿಬಂದಿ ಶಶಿ ಬಲಗೈ ಛಿದ್ರಗೊಂಡಿದ್ದು ಹೊಟ್ಟೆ, ಮುಖಕ್ಕೆ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.


ಎಸ್ಪಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದೆ ಎನ್ನುವ ಮಾಹಿತಿ ಇದೆ. ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಎಂದು ಹೇಳಲಾಗುತ್ತಿದೆ, ಆನ್ ಮಾಡದೆಯೇ ಬ್ಲಾಸ್ಟ್ ಆಗಿದೆ ಎಂದೂ ಹೇಳಲಾಗುತ್ತಿದೆ. ಕೊರಿಯರ್ ಕಚೇರಿಯಲ್ಲಿ ಕೆಲಸ ಮಾಡುವ ವ್ಯಕ್ತಿಗೆ ಪೆಟ್ಟಾಗಿದೆ. ಯಾವುದೇ ಪ್ರಾಣಾಪಾಯ ಇಲ್ಲ. ಬ್ಲಾಸ್ಟ್ ಗೆ ಏನು ಕಾರಣ ಇದೆ ಎಂದು ಕಂಡುಬಂದಿಲ್ಲ. ಮೈಸೂರಿನಿಂದ ಎಫ್.ಎಸ್.ಎಲ್ ತಂಡ ಬರುತ್ತಾರೆ. ಮಿಕ್ಸಿ ಯಾಕೆ ಮತ್ತು ಹೇಗೆ ಬ್ಲಾಸ್ಟ್ ಆಗಿದೆ ಎಂದು ಪರಿಶೀಲನೆ ನಡೆಯುತ್ತದೆ. ಕೊರಿಯರ್ ಎಲ್ಲಿಂದ ಬಂತು ಎನ್ನೋ ಮಾಹಿತಿ ಇದೆ. ಎಲ್ಲವನ್ನೂ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲ ಆಗೋದು ಬೇಡ. ಶಾರ್ಟ್ ಸರ್ಕಿಟ್ ಆಗಿದೆಯೋ ಬೇರೆ ಏನಾದ್ರು ಇದೆಯೋ ಪರಿಶೀಲನೆ ನಡೆಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
An incident took place where a parcel arrived at a courier shop in Hassan and a mixie blasted. Two days ago, the mixed parcel arrived at the DTDC Courier Shop on the Sub-Register Office Road of KR Puram Barangay of Hassan Nagar. Now there is a mixi blast and the owner of the courier, Shashi, has been seriously injured and admitted to a private hospital in Hassan.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm