ಬ್ರೇಕಿಂಗ್ ನ್ಯೂಸ್
30-12-22 10:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಹಿರಿಯ ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ನಿಧನರಾಗಿದ್ದಾರೆ. ಇತ್ತೀಚೆಗೆ ಲಿವರ್ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಎರಡು ದಿನಗಳ ಹಿಂದೆ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಐಪಿಎಸ್ ಪೂರೈಸಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ, ಮೈಸೂರು ಹಾಗೂ ಹಲವು ಜಿಲ್ಲೆಗಳಲ್ಲಿ ಎಸ್ಪಿ ಆಗಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಮೈಸೂರು ಎಸ್ಪಿಯಾಗಿಯೂ ಕರ್ತವ್ಯ ಸಲ್ಲಿಸಿದ್ದರು. ಇವರು ಕರ್ತವ್ಯ ಅಲ್ಲದೆ, ಸಂಗೀತ ಪ್ರೇಮಿಯಾಗಿದ್ದರು. ಹವ್ಯಾಸಿಯಾಗಿ ತಬಲಾ ಮತ್ತು ಮೃದಂಗ ನುಡಿಸುತ್ತಿದ್ದರು. ಹೀಗಾಗಿ ಜನಾನುರಾಗಿಯಾಗಿ ಹೆಸರು ಮಾಡಿದ್ದರು. ಇನ್ನೆರಡು ದಿನದಲ್ಲಿ ಜನವರಿ ಒಂದಕ್ಕೆ ಐಜಿಪಿ ದರ್ಜೆಗೆ ಬಡ್ತಿಗೊಂಡು ಐಜಿಪಿ ಹುದ್ದೆಗೆ ವರ್ಗಾವಣೆ ಆಗುವ ನಿರೀಕ್ಷೆಯಲ್ಲಿದ್ದರು.
IPS officer R Dileep dies of a heart attack in Bengaluru. Currently he was working as a DIG of CID, He was also commissioner of Hubbali Dharwad.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm