ಬ್ರೇಕಿಂಗ್ ನ್ಯೂಸ್
01-01-23 10:53 am Bangalore Correspondent ಕರ್ನಾಟಕ
ಬೆಂಗಳೂರು, ಜ.1 : ತುಳು ಚಿತ್ರರಂಗದ ಪ್ರತಿಭಾನ್ವಿತ ನಟ ಗಿರ್ಗಿಟ್ ಖ್ಯಾತಿಯ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಫೈನಲ್ ಸ್ಪರ್ಧೆಯಲ್ಲಿ ನಟ ಸುದೀಪ್, ರೂಪೇಶ್ ಶೆಟ್ಟಿ ಗೆಲುವನ್ನು ಘೋಷಿಸಿದ್ದಾರೆ.
ಒಟಿಟಿ ವೇದಿಕೆಯ ಮೂಲಕ ಬಿಗ್ ಬಾಸ್ ಕಾಲಿಟ್ಟಿದ್ದ ರೂಪೇಶ್ ಶೆಟ್ಟಿ ಅದರಲ್ಲೂ ಟಾಪರ್ ಎನಿಸಿದ್ದರು. ಬಳಿಕ ಕಲರ್ಸ್ ಕನ್ನಡ ವಾಹಿನಿಯ ಬಿಗ್ ಬಾಸ್ನಲ್ಲಿಯೂ ಸ್ಪರ್ಧಿಯಾಗಿದ್ದರು. ಒಟಿಟಿ ಟಾಪರ್ ಆಗಿದ್ದ ರೂಪೇಶ್ ಶೆಟ್ಟಿ ಈಗ ಬಿಗ್ ಬಾಸ್ ಸೀಸನ್ 9ರಲ್ಲೂ ವಿನ್ನರ್ ಆಗಿದ್ದು ಮತ್ತಷ್ಟು ಖ್ಯಾತಿ ಗಳಿಸಿದ್ದಾರೆ.
ಫಿನಾಲೆಯಲ್ಲಿ ರಾಕೇಶ್ ಅಡಿಗ ಟಫ್ ಫೈಟ್ ಕೊಟ್ಟಿದ್ದರು. ಇಬ್ಬರಲ್ಲಿ ಒಬ್ಬರು ಬಿಗ್ ಬಾಸ್ ವಿನ್ನರ್ ಆಗುವುದು ಖಚಿತ ಎಂಬ ನೆಲೆಯಲ್ಲಿ ಪೈಪೋಟಿ ಮೂಡಿಸಿದ್ದರು. ಇಬ್ಬರು ಸ್ಪರ್ಧಿಗಳ ಬೆಂಬಲಿಗರು, ಸ್ನೇಹಿತರು ಇವರಿಗೆ ವೋಟ್ ಮಾಡುವಂತೆ ಭಾರೀ ಪ್ರಚಾರ ನಡೆಸಿದ್ದರು. ತುಳು ಚಿತ್ರದಲ್ಲಿ ಖ್ಯಾತಿ ಗಳಿಸಿದ್ದ ರೂಪೇಶ್ ಶೆಟ್ಟಿಗೆ ಕರಾವಳಿಯಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಹೀಗಾಗಿ ಕೊನೆ ಕ್ಷಣದ ವರೆಗೂ ಅಭಿಮಾನಿಗಳಿಗೆ ಕಾತುರಗಳಿದ್ದವು. ರೂಪೇಶ್ ಶೆಟ್ಟಿ ಗೆಲುವು ಘೋಷಣೆ ಆಗುತ್ತಿದ್ದಂತೆ ರಾಕೇಶ್ ಅಡಿಗ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಬಿಗ್ ಬಾಸ್ ಫಿನಾಲೆ ವೀಕ್ನಲ್ಲಿ ದಿವ್ಯಾ ಉರುಡುಗ, ರೂಪೇಶ್ ರಾಜಣ್ಣ, ದೀಪಿಕಾ ದಾಸ್, ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ ಇದ್ದರು. ಶುಕ್ರವಾರ (ಡಿಸೆಂಬರ್ 30) ದಿವ್ಯಾ ಎಲಿಮಿನೇಟ್ ಆದರೆ, ಶನಿವಾರ (ಡಿಸೆಂಬರ್ 31) ರೂಪೇಶ್ ರಾಜಣ್ಣ ಮೊದಲು ಔಟ್ ಆದರೆ, ದೀಪಿಕಾ ದಾಸ್ ಬಳಿಕ ಹೊರಹೋದರು. ಸುದೀಪ್ ಅಕ್ಕಪಕ್ಕದಲ್ಲಿ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ ಉಳಿದಿದ್ದರು. ಕೊನೆಗೆ, ಅಭಿಮಾನಿಗಳ ನಿರೀಕ್ಷೆ ಹೆಚ್ಚಿದಾಗಲೇ ರೂಪೇಶ್ ಕೈ ಎತ್ತುವ ಮೂಲಕ ವಿನ್ನರ್ ಘೋಷಣೆ ಮಾಡಿದರು.
ಈ ಬಾರಿ ‘ಬಿಗ್ ಬಾಸ್ ಕನ್ನಡ’ ಗೆದ್ದಿರುವ ರೂಪೇಶ್ ಶೆಟ್ಟಿಗೆ 60 ಲಕ್ಷ ರೂಪಾಯಿ ದಕ್ಕಿದೆ. ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ತೆರಿಗೆ ರೂಪದಲ್ಲಿ ಕಟ್ ಆಗಲಿದೆ. ಆ ಪ್ರಕಾರ, ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಗಲಿದೆ.
The wait is over. Actor-RJ Roopesh Shetty has won the title of Bigg Boss Kannada 9. In an exciting Grand Finale, full of entertainment, the Mangaluru boy was declared the winner. Roopesh Shetty received the trophy and prize money of Rs. 50 lacs. Not just the winner of Bigg Boss Kannada season 9, Roopesh had earlier emerged as the topper of the premiere season of Bigg Boss Kannada OTT.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm