ಬ್ರೇಕಿಂಗ್ ನ್ಯೂಸ್
01-01-23 10:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ನಂದಿನಿ, ಅಮುಲ್ ವಿಲೀನ ಪ್ರಸ್ತಾಪ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು ಅಮಿತ್ ಶಾ ಹೇಳಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರ ಮಾಡಿಕೊಂಡು, ತಾಂತ್ರಿಕವಾಗಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂಬುದಾಗಿ. ಆದರೆ ವಿಪಕ್ಷಗಳು ಅದನ್ನು ತಮಗೆ ಬೇಕಾದ ರೀತಿ ಅರ್ಥೈಸಿಕೊಂಡು ಟೀಕಿಸುತ್ತಿವೆ ಎಂದು ಹೇಳಿದ್ದಾರೆ.
ಮಾರ್ಕೆಟಿಂಗ್ ನಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕಿರುತ್ತೆ. ಎರಡೂ ದೊಡ್ಡ ಸಂಸ್ಥೆಗಳು ಜೊತೆ ಜೊತೆಗೆ ಕೆಲಸ ಮಾಡಬೇಕು ಎಂದು ಅಮಿತ್ ಷಾ ಹೇಳಿದ್ದಾರೆ. ಅದರ ಅರ್ಥ ನಂದಿನಿ ಅಸ್ತಿತ್ವ ಇದ್ದೇ ಇರುತ್ತೆ ಎಂದು ಹೇಳಿದ್ದಾರೆ. ಅಮಿತ್ ಶಾ ಹೇಳಿಕೆಯ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಆದರೆ ಸಿಎಂ ಬೊಮ್ಮಾಯಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಪ್ಪು ಕಲ್ಪನೆ, ಊಹೇ ಮಾಡಿ ಟೀಕೆ ಮಾಡೋರಿಗೆ ಏನ್ ಹೇಳೋದು? ಎಂದು ಹೇಳಿದ್ದಾರೆ.

ಇನ್ನೂ 100 ವರ್ಷ ಹೋದರೂ ನಂದಿನಿ ಶಾಶ್ವತ ಇದ್ದೇ ಇರುತ್ತದೆ. ಕೆಲವು ಏರಿಯಾದಲ್ಲಿ ಒಟ್ಟಾಗಿ ಕೆಲಸ ಮಾಡಿದರೆ ನಮಗೆ ಲಾಭ ಇದೆ. ಇದಕ್ಕೆ ತಪ್ಪು ಅರ್ಥ ಮಾಡುವ ಅಗತ್ಯವಿಲ್ಲ. ಅಂದಹಾಗೆ ಈ ವಿಚಾರವನ್ನು ಮರ್ಜ್ ಮಾಡೋದು ಅಂತ ಅರ್ಥ ಅಲ್ಲ. ಅಮುಲ್ ಕೂಡ ಇರುತ್ತೆ, ನಂದಿನಿ ಕೂಡ ಇರುತ್ತೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕೆಲವು ಭಾಗದಲ್ಲಷ್ಟೆ ತಾಂತ್ರಿಕ, ಆಡಳಿತ ವಿಚಾರಗಳನ್ನ ಶೇರ್ ಮಾಡಿಕೊಂಡು ಕೆಲಸ ಮಾಡೋದು ಅಂತ ಹೇಳಿರೋದು. ಆದರೆ ವಿಪಕ್ಷವು ಏನೋನೋ ಅರ್ಥ ಮಾಡಿಕೊಂಡಿದೆ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
Chief Minister Basavaraj Bommai Sunday dismissed speculations of a merger between Karnataka’s popular milk and dairy products brand Nandini and Anand Milk Union Ltd (Amul) of Gujarat. Such ‘rumours’, he said, were due to the misinterpretation of statements made by Union Home and Cooperation Minister Amit Shah. Nandini is a brand of Karnataka Milk Federation (KMF), a government-run cooperative.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm