ಬ್ರೇಕಿಂಗ್ ನ್ಯೂಸ್
16-10-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 16: ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಆಪರೇಶನ್ ಶುರು ಮಾಡಿದೆ. ನಿಗೂಢ ಕಾರ್ಯಾಚರಣೆಗಿಳಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರ್.ಆರ್ ನಗರ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಪಕ್ಷಕ್ಕೆ ಸೆಳೆದುಕೊಂಡು ಶಾಕ್ ಕೊಟ್ಟಿದ್ದಾರೆ.
ಈಗಾಗ್ಲೇ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಹಣಾಹಣಿ ಏರ್ಪಟ್ಟಿದೆ. ಬಿಜೆಪಿಯಿಂದ ಕೊನೆಗೂ ಹಳೆಮುಖ, ದೊಡ್ಡ ಕುಳ ಮುನಿರತ್ನಗೆ ಟಿಕೆಟ್ ನೀಡಿದ್ದು ಇತ್ತ ಕಾಂಗ್ರೆಸಿನಲ್ಲೂ ನಡುಕ ಸೃಷ್ಟಿಸಿತ್ತು. ಆದರೆ, ಡಿಕೆಶಿ ಆರಂಭದಿಂದಲೇ ತನ್ನ ಆಪ್ತ ಜೆಡಿಎಸ್ ಮುಖಂಡ, ಹನುಮಂತರಾಯಪ್ಪ ಮೂಲಕ ಕ್ಷೇತ್ರಕ್ಕೆ ಕೈ ಹಾಕಿದ್ದರು. ಆಬಳಿಕ ಹನುಮಂತ ಪುತ್ರಿ, ಮಾಜಿ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದ್ದರು. ಇದೀಗ ಜೆಡಿಎಸ್ ಪಕ್ಷದ ಹುರಿಯಾಳುಗಳನ್ನೇ ಸೆಳೆದುಕೊಂಡು ಶಾಕ್ ನೀಡಿದ್ದಲ್ಲದೆ ಗೌಡ್ರ ಪಕ್ಷದ ಮತಗಳನ್ನು ಕಾಂಗ್ರೆಸಿಗೆ ಬರುವಂತೆ ಮಾಡಿದ್ದಾರೆ. ಡಿಕೆಶಿ ಈ ನಡೆ, ಇಡೀ ಚುನಾವಣೆ ತಂತ್ರಕ್ಕೇ ಹೊಸ ತಿರುವು ನೀಡಲಿದೆ ಎನ್ನಲಾಗಿದೆ.


ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಬೆಟ್ಟಸ್ವಾಮಿಗೌಡ ಹಾಗೂ ಜೆಡಿಎಸ್ನ ಬಹುತೇಕ ಪದಾಧಿಕಾರಿಗಳು ಈಗ ಡಿಕೆ ಶಿವಕುಮಾರ್ ಜೊತೆಯಾಗಿದ್ದಾರೆ. ಇವರೆಲ್ಲ ಇಂದೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಡಿಕೆಶಿ ಮತ್ತು ಟೀಂ ಅತ್ಯಂತ ರಹಸ್ಯವಾಗಿ ಆಪರೇಷನ್ ಹಸ್ತ ಮಾಡಿದ್ದು, ಹೆಚ್ಡಿಕೆಗೆ ಶಾಕ್ ನೀಡಿದ್ದಾರೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ಅಧಿಕ. ಒಂದು ಲಕ್ಷದಷ್ಟು ಒಕ್ಕಲಿಗ ಮತಗಳಿದ್ದು ಅವೇ ನಿರ್ಣಾಯಕ. ಇತ್ತ ಬಿಜೆಪಿಯಲ್ಲೂ ಒಳಗಿಂದೊಳಗೇ ಮುನಿಸಿದ್ದು ಇದು ಕೂಡ ಕಾಂಗ್ರೆಸಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.
Bangalore RR Nagara By-Elections Kpcc President DK Shivakumar gives Surprise to team JDS through operation Astha.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm