ಬ್ರೇಕಿಂಗ್ ನ್ಯೂಸ್
            
                        16-10-20 05:27 pm Bangalore Correspondent ಕರ್ನಾಟಕ
            ಬೆಂಗಳೂರು, ಅಕ್ಟೋಬರ್ 16: ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಆಪರೇಶನ್ ಶುರು ಮಾಡಿದೆ. ನಿಗೂಢ ಕಾರ್ಯಾಚರಣೆಗಿಳಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರ್.ಆರ್ ನಗರ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಪಕ್ಷಕ್ಕೆ ಸೆಳೆದುಕೊಂಡು ಶಾಕ್ ಕೊಟ್ಟಿದ್ದಾರೆ. 
   
ಈಗಾಗ್ಲೇ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ  ಚುನಾವಣೆ ರಂಗೇರಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಹಣಾಹಣಿ ಏರ್ಪಟ್ಟಿದೆ. ಬಿಜೆಪಿಯಿಂದ ಕೊನೆಗೂ ಹಳೆಮುಖ, ದೊಡ್ಡ ಕುಳ ಮುನಿರತ್ನಗೆ ಟಿಕೆಟ್ ನೀಡಿದ್ದು ಇತ್ತ ಕಾಂಗ್ರೆಸಿನಲ್ಲೂ ನಡುಕ ಸೃಷ್ಟಿಸಿತ್ತು. ಆದರೆ, ಡಿಕೆಶಿ ಆರಂಭದಿಂದಲೇ ತನ್ನ ಆಪ್ತ ಜೆಡಿಎಸ್ ಮುಖಂಡ, ಹನುಮಂತರಾಯಪ್ಪ ಮೂಲಕ ಕ್ಷೇತ್ರಕ್ಕೆ ಕೈ ಹಾಕಿದ್ದರು. ಆಬಳಿಕ ಹನುಮಂತ ಪುತ್ರಿ, ಮಾಜಿ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದ್ದರು. ಇದೀಗ ಜೆಡಿಎಸ್ ಪಕ್ಷದ ಹುರಿಯಾಳುಗಳನ್ನೇ ಸೆಳೆದುಕೊಂಡು ಶಾಕ್ ನೀಡಿದ್ದಲ್ಲದೆ ಗೌಡ್ರ ಪಕ್ಷದ ಮತಗಳನ್ನು ಕಾಂಗ್ರೆಸಿಗೆ ಬರುವಂತೆ ಮಾಡಿದ್ದಾರೆ. ಡಿಕೆಶಿ ಈ ನಡೆ, ಇಡೀ ಚುನಾವಣೆ ತಂತ್ರಕ್ಕೇ ಹೊಸ ತಿರುವು ನೀಡಲಿದೆ ಎನ್ನಲಾಗಿದೆ. 


ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಬೆಟ್ಟಸ್ವಾಮಿಗೌಡ ಹಾಗೂ ಜೆಡಿಎಸ್ನ ಬಹುತೇಕ ಪದಾಧಿಕಾರಿಗಳು ಈಗ ಡಿಕೆ ಶಿವಕುಮಾರ್ ಜೊತೆಯಾಗಿದ್ದಾರೆ. ಇವರೆಲ್ಲ ಇಂದೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಡಿಕೆಶಿ ಮತ್ತು ಟೀಂ ಅತ್ಯಂತ ರಹಸ್ಯವಾಗಿ ಆಪರೇಷನ್ ಹಸ್ತ ಮಾಡಿದ್ದು, ಹೆಚ್ಡಿಕೆಗೆ ಶಾಕ್ ನೀಡಿದ್ದಾರೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ಅಧಿಕ. ಒಂದು ಲಕ್ಷದಷ್ಟು ಒಕ್ಕಲಿಗ ಮತಗಳಿದ್ದು ಅವೇ ನಿರ್ಣಾಯಕ. ಇತ್ತ ಬಿಜೆಪಿಯಲ್ಲೂ ಒಳಗಿಂದೊಳಗೇ ಮುನಿಸಿದ್ದು ಇದು ಕೂಡ ಕಾಂಗ್ರೆಸಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.
            
            
            Bangalore RR Nagara By-Elections Kpcc President DK Shivakumar gives Surprise to team JDS through operation Astha.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm