ಬ್ರೇಕಿಂಗ್ ನ್ಯೂಸ್
03-01-23 01:27 pm Bangalore Correspondent ಕರ್ನಾಟಕ
ಬೆಂಗಳೂರು, ಜ.3: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಪಾರದರ್ಶಕ ತನಿಖೆ ನಡೆಯಲಿ, ಸಾಕ್ಷಿನಾಶ ಆಗದಂತೆ ತಡೆಯಲು ಶಾಸಕ ಅರವಿಂದ ಲಿಂಬಾವಳಿ ಅವರನ್ನು ಪೊಲೀಸರು ಬಂಧಿಸಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಎರಡು ದಿನದ ಹಿಂದೆ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ಕೆಪಿಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರೊಂದಿಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದು ನಡೆಯಬಾರದ ಘಟನೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ಆಗಿದೆ. ಪತ್ನಿ ಪ್ರದೀಪ್ಗೆ ನ್ಯಾಯ ಕೊಡಿಸಿ ಎಂದು ಅವರ ಪತ್ನಿ ಹೇಳಿದ್ದಾರೆ. 1.5 ಕೋಟಿ ರೂ. ಹೂಡಿಕೆ ಮಾಡಿದ್ದೆವು, ಒಂದೇ ಒಂದು ಪೈಸೆ ಲಾಭ ಬಂದಿಲ್ಲ. ನಮ್ಮ ಹಣ ವಾಪಸ್ ಕೊಡಿ ಎನ್ನುವುದು ಇವರ ವಾದ.

ಲಿಂಬಾವಳಿ ಈ ಭಾಗದ ಶಾಸಕರು. ಸೆಟ್ಲಮೆಂಟ್ಗೆ ಪ್ರಯತ್ನ ಮಾಡಿದ್ದಾರೆ. ಡೆತ್ ನೋಟ್ನಲ್ಲಿ 6 ಜನರ ಹೆಸರು ಇದೆ. ಲಿಂಬಾವಳಿ ಹೆಸರೂ ಇದೆ. ಈಗಾಗಲೇ ಎಫ್ಐಆರ್ ದಾಕಲಾಗಿದ್ದು, ಪೊಲೀಸರು ಹಣವನ್ನು ವಾಪಸ್ ಕೊಡಿಸಬೇಕು.
ಕೂಡಲೇ ಎಲ್ಲರನ್ನೂ ಬಂಧಿಸಬೇಕು. ಸಾವಿಗೆ ಕಾರಣವಾದರ ಮೇಲೆ ಕಾನೂನು ಕ್ರಮ ಆಗಬೇಕು. ಶಿಕ್ಷೆ ಆಗುವಂತೆ ಮಾಡಬೇಕು. ಶಾಸಕರೇ ಇರಲಿ, ಯಾರೇ ಇರಲಿ, ತಪ್ಪು ಯಾರೇ ಮಾಡಿದರೂ ತಪ್ಪೆ. ಕಾನೂನು ಪ್ರಕಾರ ಕ್ರಮ ಆಗಬೇಕು. ಶಾಸಕರನ್ನೂ ಬಂಧನ ಮಾಡಬೇಕು. ಇಲ್ಲದೇ ಹೋದರೆ ಸಾಕ್ಷಿ ನಾಶ ಮಾಡಬಹುದು. ಪೊಲೀಸರು ಪ್ರದೀಪ್ ಅವರ ಮನೆಯವರ ಮೊಬೈಲ್ ಕೇಳುತ್ತಿದ್ದಾರಂತೆ. ಹೀಗೆಲ್ಲ ಮಾಡುವುದು ಸರಿಯಲ್ಲ ಎಂದರು.

ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ, ಇದಕ್ಕೆ ಕೆ.ಎಸ್. ಈಶ್ವರಪ್ಪ ಕಾರಣ ಎಂದು ಹೇಳಿದರು. 3 ತಿಂಗಳಲ್ಲಿ ಬಿ ರಿಪೋರ್ಟ್ ಕೊಟ್ಟರು. ಇದೇ ಪರಿಸ್ಥಿತಿ ಈ ಕೇಸ್ನಲ್ಲಿಯೂ ಆಗಬಾರದು. ಸರ್ಕಾರ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಸರ್ಕಾರದ ಅವಧಿಯಲ್ಲಿ ಅನೇಕ ಜನ ಸಾಯುವುದು, ದಯಾ ಮರಣ ಕೋರುವುದು ಆಗುತ್ತಿದೆ. ಇದಕ್ಕೆ ಭ್ರಷ್ಟಾಚಾರ ಕಾರಣ. ಭ್ರಷ್ಟಾಚಾರದ ವಿರುದ್ದ ಕ್ರಮ ಆಗದೇ ಇರುವುದಕ್ಕೆ ಹೀಗೆ ಆಗುತ್ತಿದೆ. ಈ ಪ್ರಕರಣದಲ್ಲಿ ಪ್ರದೀಪ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದರು.
ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala ಅವರ ಜೊತೆಗೂಡಿ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ @RLR_BTM ಸೇರಿದಂತೆ ಇನ್ನಿತರರು ನನ್ನೊಂದಿಗಿದ್ದರು. pic.twitter.com/wMalfFvYey
— Siddaramaiah (@siddaramaiah) January 3, 2023
Businessman suicide case, Bjp MLA Limbavali should be arrested soon demands senior congress leader Siddaramaiah after he visited their residence to give his condolences.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm