ಬ್ರೇಕಿಂಗ್ ನ್ಯೂಸ್
17-10-20 11:57 am Mysore Correspondent ಕರ್ನಾಟಕ
ಮೈಸೂರು, ಅಕ್ಟೋಬರ್ 16 : ವಿಶ್ವವಿಖ್ಯಾತ ಮೈಸೂರು ದಸರಾಗೆ ಜಯದೇವ ಆಸ್ಪತ್ರೆ ನಿರ್ದೇಶಕ, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಚಾಲನೆ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ 410ನೇ ಮೈಸೂರು ದಸರಾ ಉದ್ಘಾಟನೆ ನೆರವೇರಿದೆ. ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ದಸರಾ ಉದ್ಘಾಟಿಸಿದ್ದಾರೆ. ಈ ಬಾರಿ ಕೊರೊನಾ ವಾರಿಯರ್ಸ್ಗೆ ಆದ್ಯತೆ ನೀಡಲಾಗಿದ್ದು, ವೈದ್ಯರಿಂದ ದಸರಾ ಉದ್ಘಾಟಿಸಲಾಗಿದೆ. ಅಲ್ಲದೆ ಕೊರೊನಾ ವಾರಿಯರ್ಸ್ ಸನ್ಮಾನ ಸಹ ಮಾಡಲಾಗುತ್ತಿದೆ. ಕೊರೊನಾ ಹಿನ್ನೆಲೆ ಅತ್ಯಂತ ಸರಳ, ಸಾಂಪ್ರದಾಯಿಕವಾಗಿ ದಸರಾ ಆಚರಿಸಲಾಗುತ್ತಿದೆ.
ಈ ಮೂಲಕ ಮೈಸೂರು ದಸರಾ 2020ಕ್ಕೆ ವೈಭವದ ಚಾಲನೆ ದೊರೆತಂತಾಗಿದ್ದು, ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಲಾಗಿದೆ. ಉದ್ಘಾಟಕರಿಗೆ ಸಿಎಂ ಯಡಿಯೂರಪ್ಪ ಹಾಗೂ ಸಚಿವರು ಜೊತೆಯಾಗಿದ್ದಾರೆ. ಶುಭ ತುಲಾ ಲಗ್ನದಲ್ಲಿ ದಸರಾ 2020 ಉದ್ಘಾಟನೆಗೊಂಡಿದೆ. ಮೊದಲು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಯಾವುದೇ ಸ್ವಾಗತವಿಲ್ಲದೆ ನೇರವಾಗಿ ದೇವಾಲಯಕ್ಕೆ ಸಿಎಂ ತೆರಳಿದರು. ಪ್ರತಿಬಾರಿ ಪೂರ್ಣಕುಂಭ ಸ್ವಾಗತದೊಂದಿಗೆ ಸಿಎಂ ಹಾಗೂ ಉದ್ಘಾಟಕರು ದೇವಾಲಯ ಪ್ರವೇಶಿಸುತ್ತಿದ್ದರು. ಆದರೆ ಈ ಬಾರಿ ಪೂರ್ಣಕುಂಭ ಸ್ವಾಗತ ಮಾಡಲಾಗಿಲ್ಲ.


ವೇದಿಕೆಯಲ್ಲಿ ಕೊರೊನಾ ವಾರಿಯರ್ಸ್ಗೆ ಸನ್ಮಾನ ಸಹ ಮಾಡಲಾಗಿದ್ದು, ಮರಗಮ್ಮ (ಪೌರಕಾರ್ಮಿಕರು), ಡಾ.ನವೀನ್ (ಆರೋಗ್ಯ ಇಲಾಖೆ ಮೇಡಿಕಲ್ ಆಫಿಸರ್), ರುಕ್ಮಿಣಿ (ಸ್ಟಾಫ್ ನರ್ಸ್), ನೂರ್ ಜಾನ್ (ಆಶಾ ಕಾರ್ಯಕರ್ತೆ), ಕುಮಾರ್ (ಮೈಸೂರು ನಗರ ಪೊಲೀಸ್ ಪೇದೆ), ಅಯೂಬ್ ಅಹಮದ್ (ಸಾಮಾಜಿಕ ಕಾರ್ಯಕರ್ತ) ಇವರಿಗೆ ದಸರಾ ವೇದಿಕೆಯಲ್ಲಿ ಸನ್ಮಾನ ಮಾಡಿ ಕೊರೊನಾ ಸಂದರ್ಭದಲ್ಲಿನ ಇವರ ಸೇವೆಯನ್ನು ಸ್ಮರಿಸಲಾಗಿದೆ.
ಅರಮನೆಯಲ್ಲಿ ಖಾಸಗಿ ದರ್ಬಾರ್
ವಿಶ್ವವಿಖ್ಯಾತ ಮೈಸೂರು ದಸರಾ 2020ಕ್ಕೆ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮೂಲಕ ಅರಮನೆ ಒಳಾಂಗಣ ಪಾರಂಪರಿಕ ದಸರಾ ಕಾರ್ಯಕ್ರಮಗಳ ಆರಂಭಕ್ಕೆ ಚಾಲನೆ ದೊರೆಯಲಿದೆ. ಬೆಳಗ್ಗೆ 6.15 ರಿಂದ 6.30ರ ಶುಭ ಮಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಯಿತು. 7.45ರಿಂದ 8.15ರ ಶುಭ ಮುಹೂರ್ತದಲ್ಲಿ ಕಂಕಣಧಾರಣೆ ನೆರವೇರಿತು.

ಯದುವಂಶದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ಗೆ ಕಂಕಣಧಾರಣೆ ಮಾಡಲಾಯಿತು. ಬೆಳಗ್ಗೆ 10 ಗಂಟೆಗೆ ಕಳಸ ಪೂಜೆ ಸೇರಿ ಇತರ ಧಾರ್ಮಿಕ ಆಚರಣೆ ನೆರವೇರಲಿದೆ. ನಂತರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಕೊರೊನಾ ಕಾರಣಕ್ಕೆ ಖಾಸಗಿ ದರ್ಬಾರ್ ಗೆ ಮಾಧ್ಯಮದವರಿಗೂ ನಿರ್ಬಂಧ ಹೇರಲಾಗಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ರಿಂದ ಪೂಜೆ ನೆರವೇರಿಸಲಾಗಿದೆ.
Dr C N Manjunath inaugurated the Mysore Dasara 2020 at the Chamundi Hills in the presence of Karnataka CM B S Yediyurappa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm