ಬ್ರೇಕಿಂಗ್ ನ್ಯೂಸ್
06-01-23 11:45 am HK News Desk ಕರ್ನಾಟಕ
ಬೆಳಗಾವಿ, ಜ.6 : ರಾಜ್ಯ ಬಿಜೆಪಿ ಸರ್ಕಾರ ನೀಡಿರುವ 2ಡಿ ಮೀಸಲಾತಿ ಪ್ರವರ್ಗವನ್ನು ತಿರಸ್ಕರಿಸಿರುವ ಪಂಚಮಸಾಲಿ ಸಮುದಾಯದ ನಾಯಕರು ತಮಗೆ 2ಎ ಮೀಸಲಾತಿಯೇ ಬೇಕು ಎಂದು ಮತ್ತೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಸಮುದಾಯದ ನಾಯಕರು ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ.
ಮೀಸಲಾತಿ ವಿಚಾರವಾಗಿ ಮಾತನಾಡಿದ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ಬಸವರಾಜ ಬೊಮ್ಮಾಯಿಯವರು ಸಿಎಂ ಆದಾಗಿನಿಂದ ಈವರೆಗೂ ಹಾದಿ ತಪ್ಪಿಸುವ ಕೆಲಸವನ್ನೇ ಮಾಡಿದ್ದಾರೆ. ನಮ್ಮ ಸಮಾಜಕ್ಕೆ ಹಿಂದುಳಿದ ಆಯೋಗದ ವರದಿ ತರಿಸುತ್ತಾರೆ. ಪಂಚಮಸಾಲಿಗಳಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರೆ. ಮುಂದಿನ 24 ಗಂಟೆಯಲ್ಲಿ ಮೀಸಲಾತಿ ಕೊಡ್ತಿರೋ ಇಲ್ಲವೋ ಹೇಳಬೇಕು' ಅಂತಾ ಸಿಎಂಗೆ ಅಂತಿಮ ಗಡುವು ನೀಡಿದ್ದಾರೆ.

ಮೀಸಲಾತಿ ವಿಚಾರವಾಗಿ ಹೋರಾಡುತ್ತಿರುವ ನನಗೆ ಏನು ಮಾಡ್ತಾರೆ, ಪಕ್ಷದಿಂದ ಉಚ್ಛಾಟನೆ ಮಾಡ್ತಾರೆ ಅಷ್ಟೇ. ಸರ್ಕಾರದ ಮಂತ್ರಿಗಳಿಗೆ 2ಡಿ ಅಂದ್ರೆ ಏನೂ ಅಂತಾನೇ ಗೊತ್ತಿಲ್ಲ. ಸಿಎಂ ಬೋಮ್ಮಾಯಿಯವರೇ ನಮಗೆ ಟಿಕೆಟ್ ಕೊಡದಿದ್ದರೂ ಪರವಾಗಿಲ್ಲ, ಮೀಸಲಾತಿ ಕೊಡುವುದಿಲ್ಲ ಅಂತನಾದ್ರೂ ಹೇಳಿ ಬಿಡಿ ಎಂದು ವಾಗ್ದಾಳಿ ನಡೆಸಿದ ಯತ್ನಾಳ್, 'ನಮ್ಮ ಸಮಾಜದ ಮಂತ್ರಿಗೆ ಅಧಿಕಾರ ಬೇಕಿದೆ' ಎಂದು ಪರೋಕ್ಷವಾಗಿ ಮುರುಗೇಶ್ ನಿರಾಣಿಗೆ ಟಾಂಗ್ ನೀಡಿದರು.

ಮೀಸಲಾತಿ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿಯವರು 24 ಗಂಟೆಯಲ್ಲಿ ಸ್ಪಷ್ಟ ನಿರ್ಧಾರ ತಿಳಿಸಬೇಕು. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡ್ತಿರೋ ಇಲ್ಲವೋ ಅನ್ನೋದನ್ನು ಸ್ಪಷ್ಟಪಡಿಸಬೇಕು. ಸಿಎಂ ಬೊಮ್ಮಾಯಿಯವರು ಇಡೀ ಸಮಾಜಕ್ಕೆ ಮೋಸ ಮಾಡಿದ್ದಾರೆ. ನಮ್ಮ ನಮ್ಮಲ್ಲಿಯೇ ಜಗಳ ಹಚ್ಚಲು ಪ್ರಯತ್ನ ಮಾಡಿದ್ದಾರೆ. ನಮಗೆ ಹೇಳಿದ್ರಿ 2ಡಿ ಮೀಸಲಾತಿ, ಉದ್ಯೋಗ, ಶಿಕ್ಷಣ ಸಮಾನವಾಗಿ ಕೊಡ್ತಿವಿ ಅಂತ. ಆದರೆ ನಮಗೆ ನೀವು ಮೋಸ ಮಾಡಿದ್ದೀರಿ' ಎಂದು ಯತ್ನಾಳ್ ಬೇಸರ ವ್ಯಕ್ತಪಡಿಸಿದರು.
The Panchamasali Reservation Agitation Committee has rejected the State government’s offer to include the community in the new 2D category of reservation. “We stick to our demand for inclusion in 2A category. We will continue our agitation,’‘ BJP MLA Basanagouda Patil Yatnal told journalists in Belagavi after the State-level executive committee meeting on Thursday.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm