ಬ್ರೇಕಿಂಗ್ ನ್ಯೂಸ್
06-01-23 11:45 am HK News Desk ಕರ್ನಾಟಕ
ಬೆಳಗಾವಿ, ಜ.6 : ರಾಜ್ಯ ಬಿಜೆಪಿ ಸರ್ಕಾರ ನೀಡಿರುವ 2ಡಿ ಮೀಸಲಾತಿ ಪ್ರವರ್ಗವನ್ನು ತಿರಸ್ಕರಿಸಿರುವ ಪಂಚಮಸಾಲಿ ಸಮುದಾಯದ ನಾಯಕರು ತಮಗೆ 2ಎ ಮೀಸಲಾತಿಯೇ ಬೇಕು ಎಂದು ಮತ್ತೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಸಮುದಾಯದ ನಾಯಕರು ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ.
ಮೀಸಲಾತಿ ವಿಚಾರವಾಗಿ ಮಾತನಾಡಿದ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ಬಸವರಾಜ ಬೊಮ್ಮಾಯಿಯವರು ಸಿಎಂ ಆದಾಗಿನಿಂದ ಈವರೆಗೂ ಹಾದಿ ತಪ್ಪಿಸುವ ಕೆಲಸವನ್ನೇ ಮಾಡಿದ್ದಾರೆ. ನಮ್ಮ ಸಮಾಜಕ್ಕೆ ಹಿಂದುಳಿದ ಆಯೋಗದ ವರದಿ ತರಿಸುತ್ತಾರೆ. ಪಂಚಮಸಾಲಿಗಳಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರೆ. ಮುಂದಿನ 24 ಗಂಟೆಯಲ್ಲಿ ಮೀಸಲಾತಿ ಕೊಡ್ತಿರೋ ಇಲ್ಲವೋ ಹೇಳಬೇಕು' ಅಂತಾ ಸಿಎಂಗೆ ಅಂತಿಮ ಗಡುವು ನೀಡಿದ್ದಾರೆ.

ಮೀಸಲಾತಿ ವಿಚಾರವಾಗಿ ಹೋರಾಡುತ್ತಿರುವ ನನಗೆ ಏನು ಮಾಡ್ತಾರೆ, ಪಕ್ಷದಿಂದ ಉಚ್ಛಾಟನೆ ಮಾಡ್ತಾರೆ ಅಷ್ಟೇ. ಸರ್ಕಾರದ ಮಂತ್ರಿಗಳಿಗೆ 2ಡಿ ಅಂದ್ರೆ ಏನೂ ಅಂತಾನೇ ಗೊತ್ತಿಲ್ಲ. ಸಿಎಂ ಬೋಮ್ಮಾಯಿಯವರೇ ನಮಗೆ ಟಿಕೆಟ್ ಕೊಡದಿದ್ದರೂ ಪರವಾಗಿಲ್ಲ, ಮೀಸಲಾತಿ ಕೊಡುವುದಿಲ್ಲ ಅಂತನಾದ್ರೂ ಹೇಳಿ ಬಿಡಿ ಎಂದು ವಾಗ್ದಾಳಿ ನಡೆಸಿದ ಯತ್ನಾಳ್, 'ನಮ್ಮ ಸಮಾಜದ ಮಂತ್ರಿಗೆ ಅಧಿಕಾರ ಬೇಕಿದೆ' ಎಂದು ಪರೋಕ್ಷವಾಗಿ ಮುರುಗೇಶ್ ನಿರಾಣಿಗೆ ಟಾಂಗ್ ನೀಡಿದರು.

ಮೀಸಲಾತಿ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿಯವರು 24 ಗಂಟೆಯಲ್ಲಿ ಸ್ಪಷ್ಟ ನಿರ್ಧಾರ ತಿಳಿಸಬೇಕು. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡ್ತಿರೋ ಇಲ್ಲವೋ ಅನ್ನೋದನ್ನು ಸ್ಪಷ್ಟಪಡಿಸಬೇಕು. ಸಿಎಂ ಬೊಮ್ಮಾಯಿಯವರು ಇಡೀ ಸಮಾಜಕ್ಕೆ ಮೋಸ ಮಾಡಿದ್ದಾರೆ. ನಮ್ಮ ನಮ್ಮಲ್ಲಿಯೇ ಜಗಳ ಹಚ್ಚಲು ಪ್ರಯತ್ನ ಮಾಡಿದ್ದಾರೆ. ನಮಗೆ ಹೇಳಿದ್ರಿ 2ಡಿ ಮೀಸಲಾತಿ, ಉದ್ಯೋಗ, ಶಿಕ್ಷಣ ಸಮಾನವಾಗಿ ಕೊಡ್ತಿವಿ ಅಂತ. ಆದರೆ ನಮಗೆ ನೀವು ಮೋಸ ಮಾಡಿದ್ದೀರಿ' ಎಂದು ಯತ್ನಾಳ್ ಬೇಸರ ವ್ಯಕ್ತಪಡಿಸಿದರು.
The Panchamasali Reservation Agitation Committee has rejected the State government’s offer to include the community in the new 2D category of reservation. “We stick to our demand for inclusion in 2A category. We will continue our agitation,’‘ BJP MLA Basanagouda Patil Yatnal told journalists in Belagavi after the State-level executive committee meeting on Thursday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm