ಬ್ರೇಕಿಂಗ್ ನ್ಯೂಸ್
07-01-23 12:10 pm Bangalore Correspondent ಕರ್ನಾಟಕ
ಬೆಂಗಳೂರು, ಜ.7: ನ್ಯೂಯಾರ್ಕ್ನಿಂದ ದೆಹಲಿಗೆ ನವೆಂಬರ್ 26ರಂದು ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ 72 ವರ್ಷದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಮುಂಬಯಿ ಮೂಲದ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಹಾಗೇ, ಆತನನ್ನು ದೆಹಲಿಗರೆ ಕರೆದೊಯ್ಯುತ್ತಿದ್ದಾರೆ. ದೆಹಲಿ ಪೊಲೀಸರು ಪ್ರಕರಣ ದಾಖಲು ಮಾಡುತ್ತಿದ್ದಂತೆ ಶಂಕರ್ ಮಿಶ್ರಾ ತನ್ನ ಮೊಬೈಲ್ನ್ನೆಲ್ಲ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರಿಗೆ ಆಗಮಿಸಿದ್ದ. ಇಲ್ಲಿನ ಸಂಜಯ್ನಗರದಲ್ಲಿರುವ ಒಂದು ಗೆಸ್ಟ್ಹೌಸ್ನಲ್ಲಿ ಒಬ್ಬನೇ ತಂಗಿದ್ದ. ಇಂದು ಮಧ್ಯಾಹ್ನದ ಹೊತ್ತಿಗೆ ಶಂಕರ್ ಮಿಶ್ರಾನನ್ನು ಪೊಲೀಸರು ದೆಹಲಿ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
![]()
ನವೆಂಬರ್ 26ರಂದು ಈ ವ್ಯಕ್ತಿ ಕುಡಿದು ಅಮಲೇರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ. ಆದರೆ ಇತ್ತೀಚೆಗೆ ಮಹಿಳೆ ಏರ್ ಇಂಡಿಯಾ ಅಧ್ಯಕ್ಷನಿಗೆ ಪತ್ರದ ಮೂಲಕ ದೂರು ಸಲ್ಲಿಸಿದಾಗಲೇ ವಿಷಯ ಬೆಳಕಿಗೆ ಬಂದಿತ್ತು. 'ಏರ್ ಇಂಡಿಯಾ ಸಿಬ್ಬಂದಿ ಈ ಸಂದರ್ಭವನ್ನು ಸರಿಯಾಗಿ ನಿಭಾಯಿಸಲಿಲ್ಲ. ಸೀಟು ಬದಲಿಸಿಕೊಡಲು ಪೈಲೆಟ್ ಒಪ್ಪಲಿಲ್ಲ. ನಾನು ಆ ವ್ಯಕ್ತಿಯನ್ನು ನೋಡಲು ಇಷ್ಟಪಡುವುದಿಲ್ಲ ಎಂದು ಹೇಳಿದರೂ, ಬಲವಂತವಾಗಿ ನನ್ನೆದುರು ಕರೆತಂದು ನಿಲ್ಲಿಸಿ, ಕ್ಷಮೆ ಕೇಳಿಸಿದರು' ಎಂಬಿತ್ಯಾದಿ ವಿಷಯವನ್ನೂ ಆ 72 ವರ್ಷದ ಮಹಿಳೆ ಹೇಳಿಕೊಂಡಿದ್ದರು.
ಘಟನೆ ನಡೆದ ಏರ್ ಇಂಡಿಯಾ ವಿಮಾನದ ಪೈಲೆಟ್, ಸಹ ಪೈಲೆಟ್ಗೂ ಪೊಲೀಸರು ಸಮನ್ಸ್ ನೀಡಿ, ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಅವರು ಪೊಲೀಸರ ಎದುರು ಬಂದಿರಲಿಲ್ಲ. ಹೀಗಾಗಿ ಇಂದು ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ ಎಂದೂ ಹೇಳಲಾಗಿದೆ.
Delhi Police has arrested from Bengaluru the man who allegedly urinated on a woman co-passenger on an Air India flight, officials said on Saturday. The accused, Shankar Mishra, allegedly urinated on the woman, a senior citizen, in an inebriated condition in the business class of the Air India flight from New York to Delhi on November 26 last year.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm