ಬ್ರೇಕಿಂಗ್ ನ್ಯೂಸ್
08-01-23 12:23 pm HK News Desk ಕರ್ನಾಟಕ
ಶಿವಮೊಗ್ಗ, ಜ.8: ಮುಂಜಾನೆ ಸಮಯದಲ್ಲಿ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಉದ್ಯಮಿಯೊಬ್ಬರು ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿ ಸಮೀಪ ನಡೆದಿದೆ.
ಖ್ಯಾತ ಉದ್ಯಮಿ, ಶಿವಮೊಗ್ಗ ಛೇಂಬರ್ ಆಫ್ ಕಾಮರ್ಸ್ ನಿರ್ದೇಶಕರಾಗಿದ್ದ ಭೂಪಾಳಂ ಎಸ್.ಶರತ್ (39) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶರತ್ ಅವರ ಪುತ್ರ ಸಂಚಿತ್ (12) ಗಂಭೀರ ಗಾಯಗೊಂಡಿದ್ದಾರೆ. ಸಂಚಿತ್ ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯತ್ ಕಚೇರಿ ಎದುರು ಇರುವ ಭೂಪಾಳಂ ಕುಟುಂಬದವರ ಮನೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಆವರಿಸಿದ ಕೂಡಲೇ ಭೂಪಾಳಂ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಮತ್ತೆ ಮನೆಯೊಳಗೆ ತೆರಳಿದ ಶರತ್, ಹೊಗೆಯ ಮಧ್ಯೆ ಸಿಲುಕಿ ಪ್ರಜ್ಞೆತಪ್ಪಿ ಬಿದ್ದಿದ್ದರು.
ಘಟನೆಯಲ್ಲಿ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಯ ಬೆಂಕಿ ನಂದಿಸುವ ಜೊತೆಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ತೀವ್ರ ಅಸ್ವಸ್ಥರಾಗಿ ಬಿದ್ದಿದ್ದ ಶರತ್ ರಕ್ಷಣೆ ಮಾಡಿ, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉದ್ಯಮಿ ಶರತ್ ಮೃತಪಟ್ಟಿದ್ದಾರೆ.
ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Familiar businessmen Sharath from Shivamogga dies after the house catches fire by short circuit. His son who has suffered injuries has been admitted to the hospital for treatment.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm