ಬ್ರೇಕಿಂಗ್ ನ್ಯೂಸ್
10-01-23 04:09 pm HK News Desk ಕರ್ನಾಟಕ
ಶಿವಮೊಗ್ಗ, ಜ.10: ಸಾಗರ ಪಟ್ಟಣದ ಭಜರಂಗದಳದ ಸಹ ಸಂಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸಮೀರ್ (ಎ1), ಇಮಿಯಾನ್ ಹಾಗೂ ಮನ್ಸೂರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಹಲ್ಲೆ ಪ್ರಕರಣದ A1 ಆರೋಪಿ ಸಮೀರ್ ಎಂಬಾತನ ತಂಗಿಯನ್ನು ಸುನೀಲ್ ನಾಲ್ಕೈದು ತಿಂಗಳಿನಿಂದ ಚುಡಾಯಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವುದಾಗಿ ತನಿಖೆ ವೇಳೆ ಆರೋಪಿ ತಿಳಿಸಿದ್ದಾನೆ ಎಂದು ಮಾಹಿತಿ ನೀಡಿದರು.
ತಂಗಿಯನ್ನು ಚುಡಾಯಿಸುತ್ತಿರುವ ಬಗ್ಗೆ ಸುನೀಲ್ ಗೆ ಸಮೀರ್ ಎಚ್ಚರಿಕೆ ನೀಡಿದ್ದ. ಅಲ್ಲದೇ ತಂಗಿಯ ನಂಬರ್ ಕೊಡು ಅಂತ ಸಮೀರ್ ಗೆ ಸುನೀಲ್ ಕೇಳಿದ್ದ. ಹಲವು ಬಾರಿ ಎಚ್ಚರಿಕೆ ನೀಡಿದರೂ ಚುಡಾಯಿಸಿರುವುದು ನಿಲ್ಲಿಸಿರಲಿಲ್ಲ. ಅದರಂತೆಯೇ ಸೋಮವಾರ ಬೈಕ್ ನಲ್ಲಿ ಬರುತ್ತಿದ್ದ ಸಮೀರ್ ನನ್ನು ಸುನೀಲ್ ರೇಗಿಸಿದ್ದ ಹಾಗಾಗಿ ಕುಪಿತಗೊಂಡ ಸಮೀರ್ ತನ್ನ ಬೈಕಿನಲ್ಲಿದ್ದ ಮಚ್ಚು ತೆಗೆದುಕೊಂಡು ಹಲ್ಲೆಗೆ ಯತ್ನಿಸಿರುವುದಾಗಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.
ಹಾಗೂ ಸಮೀರನು ಕುರಿಗಾಹಿ ಯುವಕನಾಗಿರುವ ಕಾರಣ ಎಂದಿನಂತೆ ಕುರಿಗಳಿಗೆ ಸೊಪ್ಪು ತರಲು ಬೈಕಿನಲ್ಲಿ ಮಚ್ಚನ್ನು ಇಟ್ಟುಕೊಂಡಿದ್ದ.ಆ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ತಿಳಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ನ ಸ್ನೇಹಿತರಾದ ಇಮಿಯಾನ್ ಮತ್ತು ಮನ್ಸೂರ್ ನ್ನು ವಶಕ್ಕೆ ಪಡೆಯಲಾಗಿದ್ದು,ಈ ಪ್ರಕರಣದಲ್ಲಿ ಇವರ ಪಾತ್ರ ಏನೆಂಬುದು ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿ ವಿಚಾರಣೆ ನಂತರ ತಿಳಿಯಲಿದೆ ಎಂದು ತಿಳಿಸಿದರು.
Sagar attack on Bajrang dal activist, three arrested, accused sister ragged reason for attack. Bajrang Dal workers staged a flash protest in front of Sagar town police station on Monday after one of its workers escaped unhurt when a person tried to attack him with a sharp weapon.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm