ಬ್ರೇಕಿಂಗ್ ನ್ಯೂಸ್
11-01-23 12:19 pm HK News Desk ಕರ್ನಾಟಕ
ಬೆಳಗಾವಿ, ಜ.11: ಸ್ಯಾಂಟ್ರೋ ರವಿ ಮತ್ತು ಸೈಕಲ್ ರವಿ ಬಿಜೆಪಿ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಳಗಾವಿಯಲ್ಲಿ ವ್ಯಂಗ್ಯವಾಡಿದ್ದಾರೆ.
ಮಹಿಳೆಯರು ಕುಂಕುಮ ಹಚ್ಚಿದಾಗ ಒಂಥರಾ, ಮೂಗುತಿ ಹಾಕಿದಾಗ ಇನ್ನೊಂಥರಾ ಹೇಗೆ ಕಾಣ್ತಾರೋ ಹಾಗೆ ಇವರೆಲ್ಲ ಈ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎಂದು ಡಿ.ಕೆ.
ಶಿವಕುಮಾರ್ ಅವರು ಕ್ರಿಮಿನಲ್ಗಳನ್ನು ಹೆಣ್ಣು ಮಕ್ಕಳ ಸೌಂದರ್ಯಕ್ಕೆ ಹೋಲಿಸಿದರು.

ʻʻಸೈಕಲ್ ರವಿ, ಸ್ಯಾಂಟ್ರೋ ರವಿ ಮುತ್ತು ರತ್ನಗಳಿದ್ದಂತೆ, ಈ ಸರ್ಕಾರಕ್ಕೆ ಶೋಭೆ ತರುತ್ತಿದ್ದಾರೆ. ಬಿಜೆಪಿ ನಾಯಕರು ಎಂದೆಂದೂ ನೆನಪು ಇಟ್ಟುಕೊಳ್ಳುವಂಥವರು ಇವರೆಲ್ಲʼʼ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ನ ಬಹು ನಿರೀಕ್ಷೆಯ ಬಸ್ ಯಾತ್ರೆಯ ಆರಂಭಕ್ಕಾಗಿ ಬೆಳಗಾವಿಗೆ ಬಂದಿರುವ ಅವರು, ʻʻಕರ್ನಾಟಕ ಜನರ ಸಮಸ್ಯೆ, ನೋವು ಅಭಿಪ್ರಾಯ ಹೇಳಲು ಅವರ ಮುಂದೆ ಹೋಗುತ್ತಿದ್ದೇವೆʼʼ ಎಂದರು.

ʻʻಮಹಾತ್ಮಾ ಗಾಂಧೀಜಿಯವರು 1924ರಲ್ಲಿ ಇದೇ ಜಾಗದಲ್ಲಿ ಸ್ವಾತಂತ್ರ್ಯ ಹೋರಾಟದ ಮಹಾ ಅಧಿವೇಶನ ನಡೆಸಿದ್ದರು. ಅದೇ ವೀರಸೌಧದಿಂದಲೇ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಿದ್ದೇವೆʼʼ ಎಂದ ಅವರು, ʻʻಸರ್ಕಾರದ ಕೊಲೆ, ಕಾಯಿಲೆ, ಭ್ರಷ್ಟಾಚಾರ ತೊಳೆಯುತ್ತೇವೆʼʼ ಎಂದರು.
ʻʻಬಿಜೆಪಿಗೆ ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ನಡೆಸಲು ಮಾಡಲು ಸಾಕಷ್ಟು ಅವಕಾಶಗಳಿದ್ದವು. ಬಂಡವಾಳ ಆಕರ್ಷಿಸುವ, ಉದ್ಯೋಗ ಸೃಷ್ಟಿಸುವ ಅವಕಾಶಗಳು ಇದ್ದವು. ಆದರೆ ಮೂರುವರೆ ವರ್ಷದಿಂದ ಈ ಸರ್ಕಾರ ಜನರ ಶಾಪಕ್ಕೆ ಒಳಗಾಗಿದೆ. ರಾಜ್ಯಕ್ಕೆ ಅಂಟಿರುವ ಶಾಪ ನಿರ್ಮೂಲನೆ ಮಾಡಲು ಪವಿತ್ರ ಭೂಮಿಯಿಂದ ಯಾತ್ರೆ ಆರಂಭಿಸುತ್ತಿದ್ದೇವೆʼʼ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ʻʻಕರ್ನಾಟದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರಾಜಧಾನಿ. ನಾವು ಅಧಿಕಾರಕ್ಕೆ ಬಂದರೆ ಜನರಿಗೆ ಒಳ್ಳೆಯ ಆಡಳಿತ ನೀಡುವ ಭರವಸೆ ನೀಡುತ್ತೇವೆʼʼ ಎಂದ ಡಿ.ಕೆ. ಶಿವಕುಮಾರ್, ʻʻಈ ತಿಂಗಳು ರಾಜ್ಯರ ಹಲವೆಡೆ ಮೊದಲ ಹಂತದ ಯಾತ್ರೆ ನಡೆಯಲಿದೆ. ನಮ್ಮ ಯಾತ್ರೆ ಬಗ್ಗೆ ಬಿಜೆಪಿ ಏನೇ ಟೀಕೆ ಮಾಡಲಿ. ಅವರು ಟೀಕೆ ಮಾಡಬೇಕು, ನಮಗೂ ಅನುಕೂಲʼʼ ಎಂದರು.
ಬಿಜೆಪಿ ತಾನು ಮಾಡಿದ ಪಾಪದ ಕೆಲಸಗಳಿಗೆ ಈ ರಾಜ್ಯದ ಜನರಿಗೆ ಉತ್ತರ ಕೊಡಬೇಕು. ಪಾಪದ ಪುರಾಣದ ಪಟ್ಟಿ ನಮ್ಮ ಬಳಿ ಇದೆ, ಅದನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ ಎಂದರು ಡಿ.ಕೆ.ಶಿವಕುಮಾರ್.
Santro ravi and cycle ravi are precious gems of BJP party slams D K Shivakumar in Belagavi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm