ಬ್ರೇಕಿಂಗ್ ನ್ಯೂಸ್
13-01-23 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.13 : ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಟ್ರೋ ರವಿ ಕೊನೆಗೂ 11 ದಿನಗಳ ಬಳಿಕ ಗುಜರಾತ್ನಲ್ಲಿ ಕರ್ನಾಟಕ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಮಂಡ್ಯ ಮೂಲದ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಮೈಸೂರಿನಲ್ಲಿ ಕೇಸು ದಾಖಲಾದ ಬಳಿಕ ಪೊಲೀಸರ ಕೈಗೆ ಸಿಗದೆ 11 ದಿನಗಳಿಂದ ತಲೆಮರೆಸಿಕೊಂಡಿದ್ದ. ಈ ಹಿಂದೆ ಕಾರ್ಯಾಚರಣೆ ನಡೆಸಿದ್ದ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸ್ಯಾಂಟ್ರೋ ರವಿ ತಪ್ಪಿಸಿಕೊಂಡಿದ್ದ. ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧನ ಮಾಡಲು ಕರ್ನಾಟಕ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದರು.

ಹತ್ತು ದಿನಗಳಾದರೂ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧಿಸುವುದು ಸವಾಲಾಗಿತ್ತು. ಬಂಧಿಸಲೇ ಬೇಕು ಎಂದು ಪಣ ತೊಟ್ಟಿದ್ದ ಕರ್ನಾಟಕ ಪೊಲೀಸರು, ಆತನ ಸೆರೆಗೆ ನಾಲ್ವರು ಎಸ್ಪಿಗಳ ವಿಶೇಷ ತಂಡ ರಚನೆ ಮಾಡಿದ್ದರು. ಈ ತಂಡ ಹಗಲಿರುಳೂ ಸ್ಯಾಂಟ್ರೋ ರವಿ ಪತ್ತೆಗಾಗಿ ಹುಡುಕಾಟ ನಡೆಸಿತ್ತು. ಈ ನಡುವೆ ಸ್ಯಾಂಟ್ರೋ ರವಿ ಗುಜರಾತ್ ತಲುಪಿದ್ದಾನೆ ಎಂಬ ಸುಳಿವು ಸಿಕ್ಕ ಕೂಡಲೇ ಅಲ್ಲಿಗೆ ಧಾವಿಸಿದ ಪೊಲೀಸರ ವಿಶೇಷ ತಂಡ, ಆತನನ್ನು ಬಂಧನ ಮಾಡಿದೆ. ಇದೀಗ ಸ್ಯಾಂಟ್ರೋ ರವಿಯನ್ನು ಕರ್ನಾಟಕಕ್ಕೆ ಕರೆತರಲಾಗುತ್ತಿದೆ.
ಈ ಹಿಂದೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲೂ ಸ್ಯಾಂಟ್ರೋ ರವಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಮಫ್ತಿಯಲ್ಲಿ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಪೊಲೀಸರಿಂದ ತಪ್ಪಿಸಿಕೊಳ್ಳಲು ಮೈಸೂರು, ಬೆಂಗಳೂರು ಹಾಗೂ ಮಂಗಳೂರಿನಲ್ಲೂ ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಓಡಾಡಿದ್ದ ಎಂದು ಎನ್ನಲಾಗಿದೆ.
Hightech pimp Santro Ravi arrested after 11 days at Gujarat by Karnataka police. K. S. Manjunath, an alleged human trafficker popularly known as ‘Santro Ravi’ who is in the eye of a storm over his alleged role in police transfers and links to several politicians of the ruling BJP in Karnataka, was arrested in Gujarat, on January 13.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm