ಬ್ರೇಕಿಂಗ್ ನ್ಯೂಸ್
16-01-23 06:14 pm Bangalore Correspondent ಕರ್ನಾಟಕ
ಬೆಂಗಳೂರು, ಜ.15: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂರು ವರ್ಷಗಳ ಆಡಳಿತದ ಅವಧಿಯಲ್ಲಿ ಶೇಕಡ 40ರಷ್ಟು ಲಂಚದ ಮೂಲಕ 1.5 ಲಕ್ಷ ಕೋಟಿ ಲೂಟಿ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ವತಿಯಿಂದ ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿರುವ 'ನಾ ನಾಯಕಿ' ಸಮಾವೇಶದಲ್ಲಿ ಮಾತನಾಡಿದ ಅವರು, 'ಇಲ್ಲಿನ ಸರ್ಕಾರ ಯಾವ ಕೆಲಸ ಮಾಡಿದರೂ ಶೇ 40ರಷ್ಟು ಲಂಚ ಪಡೆಯುತ್ತಿದೆ. ಜನರ ತೆರಿಗೆಯ ಹಣ ಲಂಚದ ರೂಪದಲ್ಲಿ ಸರ್ಕಾರದಲ್ಲಿರುವ ಕೆಲವರ ಜೇಬು ಸೇರುತ್ತಿದೆ' ಎಂದರು.

ಬಿಬಿಎಂಪಿಯಲ್ಲಿ 8,000 ಕೋಟಿ ಮೊತ್ತದ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರೆ, 3,200 ಕೋಟಿ (ಶೇ 40) ಸರ್ಕಾರದಲ್ಲಿರುವವರಿಗೆ ಸಂದಾಯ ಆಗುತ್ತಿದೆ. ಜನರ ಹಣದ ಲೂಟಿ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.

ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯಲ್ಲಿ ನಡೆದಿರುವ ಹಗರಣ ನಾಚಿಕೆಗೇಡಿನ ಸಂಗತಿ. ಬಿಜೆಪಿ ಸರ್ಕಾರವು ಪೊಲೀಸ್ ಪಡೆಗಳನ್ನೂ ಮಾರಾಟಕ್ಕೆ ಇಟ್ಟಿರುವುದಕ್ಕೆ ಸಾಕ್ಷಿ ಎಂದರು.
ವಾಹನ ಚಾಲನಾ ಪರವಾನಗಿ, ನೋಂದಣಿ ಎಲ್ಲದಕ್ಕೂ ಲಂಚ ಕೊಡಬೇಕು. ಅಧಿಕಾರಿಗಳ ನೇಮಕ, ವರ್ಗಾವಣೆ, ಸ್ಥಳ ನಿಯುಕ್ತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಹೇಳಿದರು.


ಇಂತಹ ಸರ್ಕಾರದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರಕುವ ಭರವಸೆ ಇದೆಯೆ? ಇವರಿಂದ ಭವಿಷ್ಯ ಉತ್ತಮಗೊಳ್ಳುವ ಭರವಸೆ ಇದೆಯೆ' ಎಂದು ಸಭೆಯಲ್ಲಿದ್ದ ಜನರನ್ನು ಪ್ರಶ್ನಿಸಿದರು.



ಭ್ರಷ್ಟಾಚಾರದ ವಿಷಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಅನೇಕ ಕಸರತ್ತು ಮಾಡುತ್ತಿದ್ದಾರೆ. ಮಕ್ಕಳ ಕಲಿಕೆಯ ಪಠ್ಯಕ್ರಮಕ್ಕೂ ಕೈ ಹಾಕಿದ್ದಾರೆ. ಬಸವಣ್ಣ ಸೇರಿದಂತೆ ಅನೇಕ ಮಹನೀಯರಿಗೆ ಸಂಬಂಧಿಸಿದ ಪಠ್ಯಗಳನ್ನು ತಿರುಚಿದ್ದಾರೆ. ಇದೆಲ್ಲವೂ ಕೆಲವರ ಆಣತಿಯಂತೆ ನಡೆದಿದೆ ಎಂದು ದೂರಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬದುಕು ದುಸ್ತರವಾಗಿದೆ. ಡಾ. ಮನಮೋಹನ್ ಸಿಂಗ್ ಸರ್ಕಾರದ ಅವಧಿಗೆ ಹೋಲಿಸಿದರೆ ಎಲ್ಪಿಜಿ ಸಿಲಿಂಡರ್ ದರ ದುಪ್ಪಟ್ಟಿಗಿಂತ ಜಾಸ್ತಿಯಾಗಿದೆ ಎಂದು ದೂರಿದರು.
PSI Scam Shameful Priyanka Gandhis Attack On BJP Ahead Of Karnataka Polls 2023. The Congress in Karnataka offered a Rs 2,000 monthly stipend to every housewife if elected, declared party leader Priyanka Gandhi Vadra during a convention in Bengaluru on Monday, news agency PTI reported.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm