ಬ್ರೇಕಿಂಗ್ ನ್ಯೂಸ್
16-01-23 10:25 pm HK News Desk ಕರ್ನಾಟಕ
ಶಿವಮೊಗ್ಗ, ಜ.16: ಹೋರಿ ಓಡಿಸುವ ಸ್ಪರ್ಧೆಯನ್ನು ವೀಕ್ಷಿಸಲು ಬಂದಿದ್ದ ಇಬ್ಬರು ಯುವಕರು ಹೋರಿ ತಿವಿತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಮಳೂರು ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹೋರಿ ಓಡಿಸುವ ಸ್ಪರ್ಧೆ ನಡೆಯುತ್ತಿದ್ದಾಗ ವೀಕ್ಷಣೆಗೆ ಬಂದಿದ್ದ ರಂಗನಾಥ್ (24) ಹೋರಿ ತಿವಿತಕ್ಕೊಳಗಾಗಿ ಗಾಯಗೊಂಡಿದ್ದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕಿನ ಕೊನಗವಳ್ಳಿಯಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಆಲ್ಕೊಳದ ಲೋಕೇಶ್(31) ಎಂಬವರು ಗಾಯಗೊಂಡಿದ್ದು, ಇಬ್ಬರು ಕೂಡ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತಿದ್ದಾಗ ರಂಗನಾಥ್ ಅದನ್ನು ನೋಡಲೆಂದು ಸ್ಥಳಕ್ಕೆ ಬಂದಿದ್ದರು. ಈ ವೇಳೆ, ಹೋರಿಯು ಏಕಾಏಕಿ ನುಗ್ಗಿ ಬಂದು ಯುವಕರನ್ನು ತಿವಿದು ಹಾಕಿದೆ. ರಂಗನಾಥ್ ಗಂಭೀರ ಗಾಯಗೊಂಡಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊನಗವಳ್ಳಿಯಲ್ಲೂ ಲೋಕೇಶ್ ಸೇರಿದಂತೆ ಜನರತ್ತ ಗೂಳಿ ನುಗ್ಗಿ ಬಂದಿದ್ದು, ತಿವಿದು ಹಾಕಿದೆ. ಈ ವೇಳೆ, ಲೋಕೇಶ್ ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆ ಸೇರಿದ್ದರು. ಅವರಿಬ್ಬರು ಕೂಡ ಸೋಮವಾರ ಸಾವು ಕಂಡಿದ್ದಾರೆ.
ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಕ್ರಾಂತಿ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಹೋರಿ ಓಡಿಸುವ ಸ್ಪರ್ಧೆ ನಡೆಯುತ್ತದೆ. ತರಬೇತಿ ಮಾಡಲ್ಪಟ್ಟಿರುವ ಹೋರಿಯನ್ನು ಓಡಿಸುತ್ತಾ ಮುನ್ನಡೆಯುವಾಗ ಉದ್ದಕ್ಕೂ ನಿಲ್ಲುವ ಯುವಕರು ಅದನ್ನು ಹಿಡಿಯಲು ಯತ್ನಿಸುತ್ತಾರೆ. ಹೋರಿಯನ್ನು ಹಿಡಿದು ನಿಲ್ಲಿಸುವ ಯುವಕರಿಗೆ ನಗದು ಬಹುಮಾನ ಇರುತ್ತದೆ. ಶಿವಮೊಗ್ಗದಲ್ಲಿ ನಡೆದ ಘಟನೆಯಲ್ಲಿ ಇತರ ಆರು ಮಂದಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸ್ಪರ್ಧೆ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga Hori habba, two dead.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm