ಬ್ರೇಕಿಂಗ್ ನ್ಯೂಸ್
18-10-20 12:47 pm Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ 18: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಹೆತ್ತೂರು ಅವರು ಪತ್ನಿ, ಇಬ್ಬರು ಚಿಕ್ಕ ವಯಸ್ಸಿನ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂಧಿಸಲಿಲ್ಲ. ಅ.18 ರ ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.
ಮೈಸೂರಿನ ಪ್ರಜಾವಾಣಿ ವರದಿಗಾರ ಪವನ್ ಬದುಕಿ ಬರಲೆಂದು ಅವರ ಪತ್ರಕರ್ತ ಸ್ನೇಹಿತರು ಪ್ರಾರ್ಥಿಸಿದ್ದು ಪ್ರಯೋಜನವಾಗಲಿಲ್ಲ.ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.
ಪತ್ರಕರ್ತ ಪವನ್ ಹೆತ್ತೂರು ಕೊರೊನಾ ಸೋಂಕಿನಿಂದ ನಿಧನವಾಗಿರುವುದಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮಡಿಕೇರಿಯ ಪ್ರಜಾವಾಣಿ ವರದಿಗಾರ ಕೆ.ಎ ಆದಿತ್ಯ ಮಾತನಾಡಿ, ನನ್ನ ಸಹೋದ್ಯೋಗಿ, ಗೆಳೆಯ ಪವನ್ಗೆ ಏನೂ ಆಗುವುದಿಲ್ಲ ಎಂಬ ನಂಬಿಕೆಯಿತ್ತು. ಮತ್ತೆ ಮೊದಲಿನಂತೆ ಆಗುವ ಭರವಸೆಯೂ ಎರಡು ದಿನಗಳ ಹಿಂದೆ ಮೂಡಿತ್ತು. ವಿಧಿ ಕ್ರೂರಿ ಕೊರೊನಾ ಈ ರೀತಿ ಮಾಡಿದೆ. ಅವನ ನಗು, ಮಾತು ಕಣ್ಮುಂದೆ ಬರುತ್ತಿದೆ. ಚಿಕ್ಕ ಅವಳಿ ಮಕ್ಕಳಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದರು.
ಎರಡು ದಿನಗಳ ಎಲ್ಲ ಪತ್ರಕರ್ತ ಗೆಳೆಯರಿಗೆ ಆಸ್ಪತ್ರೆಯಿಂದ ಪವನ್ ಮಸೇಜ್ ಸಹ ಮಾಡಿದ್ದರು. ಆದರೆ, ಕೊರೊನಾ ಅವನಿಗೆ ಗೊತ್ತಿಲ್ಲದೇ ಅವನ ಶ್ವಾಸಕೋಶ ಹಾಳು ಮಾಡಿತ್ತು ಎಂದರು.
Young Kannada Journalist dies due to Covid 19. The deceased has been identified as Pawan (35) from mysore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm