ಬ್ರೇಕಿಂಗ್ ನ್ಯೂಸ್
18-10-20 12:47 pm Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ 18: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಹೆತ್ತೂರು ಅವರು ಪತ್ನಿ, ಇಬ್ಬರು ಚಿಕ್ಕ ವಯಸ್ಸಿನ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂಧಿಸಲಿಲ್ಲ. ಅ.18 ರ ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.
ಮೈಸೂರಿನ ಪ್ರಜಾವಾಣಿ ವರದಿಗಾರ ಪವನ್ ಬದುಕಿ ಬರಲೆಂದು ಅವರ ಪತ್ರಕರ್ತ ಸ್ನೇಹಿತರು ಪ್ರಾರ್ಥಿಸಿದ್ದು ಪ್ರಯೋಜನವಾಗಲಿಲ್ಲ.ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.
ಪತ್ರಕರ್ತ ಪವನ್ ಹೆತ್ತೂರು ಕೊರೊನಾ ಸೋಂಕಿನಿಂದ ನಿಧನವಾಗಿರುವುದಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮಡಿಕೇರಿಯ ಪ್ರಜಾವಾಣಿ ವರದಿಗಾರ ಕೆ.ಎ ಆದಿತ್ಯ ಮಾತನಾಡಿ, ನನ್ನ ಸಹೋದ್ಯೋಗಿ, ಗೆಳೆಯ ಪವನ್ಗೆ ಏನೂ ಆಗುವುದಿಲ್ಲ ಎಂಬ ನಂಬಿಕೆಯಿತ್ತು. ಮತ್ತೆ ಮೊದಲಿನಂತೆ ಆಗುವ ಭರವಸೆಯೂ ಎರಡು ದಿನಗಳ ಹಿಂದೆ ಮೂಡಿತ್ತು. ವಿಧಿ ಕ್ರೂರಿ ಕೊರೊನಾ ಈ ರೀತಿ ಮಾಡಿದೆ. ಅವನ ನಗು, ಮಾತು ಕಣ್ಮುಂದೆ ಬರುತ್ತಿದೆ. ಚಿಕ್ಕ ಅವಳಿ ಮಕ್ಕಳಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದರು.
ಎರಡು ದಿನಗಳ ಎಲ್ಲ ಪತ್ರಕರ್ತ ಗೆಳೆಯರಿಗೆ ಆಸ್ಪತ್ರೆಯಿಂದ ಪವನ್ ಮಸೇಜ್ ಸಹ ಮಾಡಿದ್ದರು. ಆದರೆ, ಕೊರೊನಾ ಅವನಿಗೆ ಗೊತ್ತಿಲ್ಲದೇ ಅವನ ಶ್ವಾಸಕೋಶ ಹಾಳು ಮಾಡಿತ್ತು ಎಂದರು.
Young Kannada Journalist dies due to Covid 19. The deceased has been identified as Pawan (35) from mysore.
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm