ಬ್ರೇಕಿಂಗ್ ನ್ಯೂಸ್
18-10-20 01:11 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 18 : ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದು ಗೋದಾಮಿನಲ್ಲಿ ಶೇಖರಿಸಿಟ್ಟಿದ್ದ 2.5 ಕೇಜಿ ಚಿನ್ನ ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದ್ದಾರೆ.

ಕಸ್ಟಮ್ಸ್ ಇಲಾಖೆಯ ಜಂಟಿ ಆಯ್ತುಕ ಎಂ.ಜೆ. ಚೇತನ್ ದೂರಿನ ಮೇರೆಗೆ ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಇಲಾಖೆಯ ಸಹಾಯಕ ಆಯುಕ್ತ ವಿನೋದ್ ಚಿನ್ನಪ್ಪ ಮತ್ತು ಕೇಶವ್, ಸುಪರಿಟೆಂಡೆಂಟ್ ಎನ್. ಜಿ ರವಿಶೇಖರ್, ಕೆಬಿ ಲಿಂಗರಾಜು ಮತ್ತು ಖಾಸಗಿ ವ್ಯಕ್ತಿ ಎಸ್.ಟಿ ಹಿರೇಮಠ್ ವಿರುದ್ಧ ಎಫ್ಐರ್ ದಾಖಲಾಗಿದೆ.
ಕಳ್ಳ ಸಾಗಣೆಯ ಮೂಲಕ ದೇಶಕ್ಕೆ ಚಿನ್ನ ಸಾಗಿಸುವ ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಾರೆ. ಆದರೆ, ಕಳೆದ 2012 ರಿಂದ 14ರ ಮಧ್ಯೆ 13 ಪ್ರಕರಣಗಳಲ್ಲಿ ಎರಡು ಕೇಜಿ 594 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಸಿಕ್ಕಿಬಿದ್ದ ಚಿನ್ನವನ್ನು ವಿಮಾನ ನಿಲ್ದಾಣದ ಕಾರ್ಗೋ ಗೋದಾಮಿನಲ್ಲಿ ಇಡಲಾಗಿತ್ತು. ಆದರೆ ಅಲ್ಲಿ ಇಟ್ಟಿದ್ದ ಚಿನ್ನ ಈಗ ನಾಪತ್ತೆಯಾಗಿರುವುದು ಹೈದರಾಬಾದಿನ ವಿಚಕ್ಷಣ ದಳದ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ.
ಈ ವೇಳೆ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ವಿಚಕ್ಷಣ ದಳದ ಅಧಿಕಾರಿಗಳ ಮಾಹಿತಿಯ ಮೇರೆಗೆ ಕಸ್ಟಮ್ಸ್ ಇಲಾಖೆ ಆಯುಕ್ತ ಚೇತನ್ ದೂರು ನೀಡಿದ್ದರು. ಅದರಂತೆ ಸಿಬಿಐ ಅಧಿಕಾರಿಗಳು ಅ.12 ರಂದು ಎಫ್ಐಆರ್ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
In a startling incident, as much as 2.5 kg of gold has gone missin from the cargo section of Bengaluru Kempegowda international godown. FIR has been registered against 5 custom officers.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm