ಬ್ರೇಕಿಂಗ್ ನ್ಯೂಸ್
19-01-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ಜ.19: ರಾಜಧಾನಿ ಬೆಂಗಳೂರಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಮೆಟ್ರೋ ಪಾತ್ರ ದೊಡ್ಡದು. ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದ ಮದುಮಗಳೊಬ್ಬಳು ಮುಹೂರ್ತ ಮೀರುವ ಭಯದಲ್ಲಿ ಕಾರಿನಿಂದ ಜಿಗಿದು ಮೆಟ್ರೋಗೆ ಹಾರಿದ ಘಟನೆ ನಡೆದಿದೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್ ಆಗುತ್ತಿದೆ.
ಮದುವೆ ಮಂಟಪಕ್ಕೆ ಸರಿಯಾದ ಸಮಯಕ್ಕೆ ತಲುಪುವ ಸಲುವಾಗಿ ಕುಟುಂಬ ಸಮೇತ ಮೆಟ್ರೋ ಟ್ರೈನ್ನಲ್ಲಿ ಹೊರಟಿದ್ದಾರೆ. ಮದುಮಗಳು ಧಾರೆ ಸೀರೆಯುಟ್ಟು, ಅಲಂಕಾರ ಭೂಷಿತೆಯಾಗಿ ಹೊರಟಿದ್ದು, ಮೆಟ್ರೋ ಜರ್ನಿ ವಿಡಿಯೊ ವೈರಲ್ ಆಗುತ್ತಿದೆ. ಆಭರಣಗಳ ಸಹಿತ ಮದುವೆಗೆ ಮೇಕಪ್ ಮಾಡಿಕೊಂಡಿದ್ದ ವಧುವು ಕಾರಿನಲ್ಲಿ ಮದುವೆ ಮಂಟಪದತ್ತ ಹೊರಟಿದ್ದಾರೆ. ಆದರೆ, ಬೆಂಗಳೂರಿನ ಟ್ರಾಫಿಕ್ನಿಂದಾಗಿ ನಿಧಾನವಾಗಿ ಕಾರು ಮೂವ್ ಆಗುತ್ತಿತ್ತು. ಅತ್ತ ಮದುವೆ ಮನೆಯಲ್ಲಿ ಪೋಷಕರಿಗೆ ಟೆನ್ಶನ್ ಶುರುವಾಗಿದೆ. ಹೊತ್ತು ಮೀರುತ್ತಿದೆ, ಇನ್ನೂ ಎಲ್ಲಿದ್ದೀಯಾ, ಬೇಗ ಬಾ ಎಂಬ ಕರೆ ಬರುತ್ತಲೇ ಇತ್ತು. ಇತ್ತ ವಧುವಿಗೂ ಅದೇ ಟೆನ್ಶನ್ ಮುಹೂರ್ತ ವೀರಿದರೆ ಕಥೆ ಏನು? ಎಂಬ ಚಿಂತೆ.
ಹೀಗಾಗಿ ಟ್ರಾಫಿಕ್ ಕ್ಲಿಯರ್ ಆಗಲಿದೆ, ಕಾರಿನಲ್ಲೇ ಹೋಗಿ ಬಿಡುತ್ತೇನೆ ಎಂದೆಲ್ಲ ಯೋಚಿಸುತ್ತಾ ಕೂರುವಷ್ಟೂ ಸಮಯವಲ್ಲ ಎಂದು ಯೋಚಿಸಿದ ವಧು ಕೂಡಲೇ ಕಾರಿನಿಂದ ಇಳಿಯುವ ಯೋಚನೆ ಮಾಡಿದರು. ಅಲ್ಲೇ ಇದ್ದ ಮೆಟ್ರೋ ಸ್ಟೇಶನ್ ಬಳಿಗೆ ಓಡಿದರು. ಮೆಟ್ರೋ ಟಿಕೆಟ್ ಪಡೆದು ಕೊನೆಗೆ ನಿರಾಳವಾಗಿ ಕಲ್ಯಾಣ ಮಂಟಪವನ್ನು ತಲುಪಿದರು.
ಈ ಎಲ್ಲ ದೃಶ್ಯಗಳನ್ನು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಲಾಗಿದೆ. ಇದಕ್ಕೆ ನೂರಾರು ಕಮೆಂಟ್ಗಳು ಬಂದಿದ್ದು, 'ಒಂದು ವೇಳೆ ಟ್ರಾಫಿಕ್ ಕ್ಲಿಯರ್ ಆಗುವುದೆಂದು ಕಾರಿನಲ್ಲಿ ಕುಳಿತಿದ್ದರೆ ಮದುವೆ ಮುಹೂರ್ತವೇ ಮುಗಿದು ಹೋಗುತ್ತಿತ್ತು' ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಬೆಂಗಳೂರು ಟ್ರಾಫಿಕ್ ಯಾವೆಲ್ಲ ರೀತಿಯಲ್ಲಿ ತೊಂದರೆಯನ್ನುಂಟು ಮಾಡುತ್ತದೆ ಎಂಬುದಕ್ಕೆ ಸಾಕ್ಷಿ ಎಂದೂ ಸಹ ಚರ್ಚೆಗಳು ಶುರುವಾಗಿವೆ. ಒಟ್ಟಿನಲ್ಲಿ ಟ್ರಾಫಿಕ್ನಿಂದ ಮುಹೂರ್ತ ಮೀರಿಹೋಗುತ್ತಿದ್ದ ಮದುವೆಯು ಮೆಟ್ರೋದಿಂದಾಗಿ ಸುಸೂತ್ರವಾಗಿ ನೆರವೇರಿ ಆಕೆಯ ಕೊರಳಿಗೆ ಮಂಗಳಸೂತ್ರ ಬೀಳುವಂತಾಗಿದೆ.
Whatte STAR!! Stuck in Heavy Traffic, Smart Bengaluru Bride ditches her Car, & takes Metro to reach Wedding Hall just before her marriage muhoortha time!! @peakbengaluru moment 🔥🔥🔥 pic.twitter.com/LsZ3ROV86H
— Forever Bengaluru 💛❤️ (@ForeverBLRU) January 16, 2023
On the day of her wedding, this city woman ditched her car and used the metro to reach her wedding in time. Social media users have been sharing a video of the bride and her companions on the metro, all while grinning widely. Another video shows her at the event, dressed to the nines and sitting in the mandap.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm