ಬ್ರೇಕಿಂಗ್ ನ್ಯೂಸ್
18-10-20 03:00 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ .18: ಕೂಲಿ ಕಾರ್ಮಿಕನೊಬ್ಬ ಮಟನ್ ಸ್ಟಾಲ್ನಿಂದ ಚಾಕುವನ್ನು ತೆಗೆದುಕೊಂಡು ದಾರಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದಿದ್ದರಿಂದ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕಾಟನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಾರಿ (30) ಎಂದು ಗುರುತಿಸಲಾಗಿದೆ. ವೇಲಾಯುಧನ್, ಮುನಿಸ್ವಾಮಿ ಎಂಬುವವರು ಆಸ್ಪತ್ರೆಯ ತುರ್ತು ನಿಘಾಗಟಕದಲ್ಲಿದ್ದರೆ, ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿ ಎಂ.ಗಣೇಶ್(35)ನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿ ಕಾಟನ್ಪೇಟೆ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಬೆಳಗ್ಗೆ 8.30ರ ಸುಮಾರಿನಲ್ಲಿ ಆಂಜನಪ್ಪಗಾರ್ಡ್ನ ನಿವಾಸಿ ಎಂ.ಗಣೇಶ್ ಬಾಳೆಕಾಯಿ ಮಂಡಿ ಹತ್ತಿರ ಮಟನ್ ತರಲು ಹೋಗಿದ್ದ. ಆ ಸಂದರ್ಭದಲ್ಲಿ ಮಟನ್ ಶಾಪ್ನಲ್ಲಿದ್ದ ಚಾಕುವನ್ನು ತೆಗೆದುಕೊಂಡು ಎದುರಿಗೆ ಸಿಕ್ಕ ಸಿಕ್ಕವರಿಗೆಲ್ಲಾ ಇರಿದಿದ್ದಾನೆ.
ಆಂಜನಪ್ಪಗಾರ್ಡನ್, ಛಲವಾದಿಪಾಳ್ಯ, ಭಕ್ಷುಗಾರ್ಡನ್ ಸೇರಿದಂತೆ ಸುಮಾರು ಎರಡು ಕಿ.ಮೀ. ದೂರದವರೆಗೂ ಓಡಾಡಿರುವ ಆರೋಪಿ ಗಣೇಶ್ ಎದುರಿಗೆ ಸಿಕ್ಕ ಸಿಕ್ಕವರಿಗೆಲ್ಲಾ ಇರಿದಿದ್ದಾನೆ. ಈ ಘಟನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಾರಿ ಎಂಬುವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐದು ಮಂದಿಗೆ ಗಾಯಗಳಾಗಿವೆ. ಇಬ್ಬರು ಗಂಭೀರ ಪರಿಸ್ಥಿತಿಯಲ್ಲಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೂ ಆರೋಪಿಗೂ ಯಾವುದೇ ಸಂಬಂಧವಿಲ್ಲ. ವೈಯಕ್ತಿಕ ದ್ವೇಷ ಕೂಡ ಇಲ್ಲ. ಎದುರಿಗೆ ಸಿಕ್ಕ ಕಾರಣಕ್ಕಾಗಿಯೇ ಚಾಕುವಿನಿಂದ ಚುಚ್ಚಿದ್ದಾನೆ.
ಬೆಳಗ್ಗೆ ಗಸ್ತು ತಿರುಗುತ್ತಿದ್ದ ಪಿಎಸ್ಐ ಮೂರ್ತಿ, ಕಾನ್ಸ್ಟೇಬಲ್ ಶಿವಮೂರ್ತಿ ನಾಯಕ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸಮಯ ಪ್ರಜ್ಞೆಯಿಂದ ಆರೋಪಿಯನ್ನು ಬಂಧಿಸಿ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಡಿಸಿಪಿ ಸಂಜೀವ್ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದ್ದು, ಕಾಟನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಆರೋಪಿ ಈ ಕೃತ್ಯ ಎಸಗಲು ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.ಮಧ್ಯ ಸೇವಿಸಿದ್ದನೆ, ಗಾಂಜಾ ಮತ್ತಿನಲ್ಲಿ ಈ ಕೃತ್ಯ ಎಸಗಿರಬಹುದೆ, ಮಾನಸಿಕ ಅಸ್ವಸ್ಥನೇ ಎಂಬೆಲ್ಲಾ ಅಂಶಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳ್ಳಂಬೆಳಗ್ಗೆಯೇ ಆರೋಪಿ ಚಾಕು ಹಿಡಿದು ಎದುರಿಗೆ ಸಿಕ್ಕವರನ್ನೆಲ್ಲಾ ಚುಚ್ಚುತ್ತಿರುವುದನ್ನು ಕಂಡು ಜನ ದಂಗಾಗಿ ಹೋದರು. ಬಹಳಷ್ಟು ಮಂದಿ ಹೆದರಿ ಮನೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡರು. ಇಡೀ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಆರೋಪಿ ಗಣೇಶ್ನನ್ನು ಎರಡು ವರ್ಷಗಳ ಹಿಂದೆ ಪತ್ನಿ ಬಿಟ್ಟು ಹೋಗಿದ್ದಾಳೆ. ತಾಯಿ ಜತೆ ವಾಸವಾಗಿದ್ದ ಗಣೇಶ್ ಆಕೆಯ ಜತೆಯೂ ಪದೇ ಪದೇ ಜಗಳವಾಡಿ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ.
In a shocking event a coolie worker in Bangalore stabs people in Bangalore in which one of the person is dead and 5 of them are in serious condition.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am