ಬ್ರೇಕಿಂಗ್ ನ್ಯೂಸ್
23-01-23 05:22 pm HK News Desk ಕರ್ನಾಟಕ
ಹಾವೇರಿ, ಜ.23: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳಿಗೆ ಈಗ ಮತದಾರನೇ ಮನೆ ದೇವರು. ಹೇಗಾದರೂ ಮತ್ತೆ ಗೆದ್ದು ಬರಬೇಕೆಂಬ ಗುಂಗಿನಲ್ಲಿ ಮತದಾರನ ಓಲೈಕೆಗೆ ತೊಡಗಿದ್ದಾರೆ. ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ ಪಕ್ಷೇತರ ಶಾಸಕ, ಮಾಜಿ ಸಚಿವ ಆರ್.ಶಂಕರ್ ಮತದಾರರಿಗೆ ಕುಕ್ಕರ್ ಕೊಡಲು ಶುರು ಮಾಡಿದ್ದಾರೆ.
ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರದ ಜನತೆಗೆ ಆರ್. ಶಂಕರ್ ಕುಕ್ಕರ್ ಗಿಫ್ಟ್ ಕೊಟ್ಟಿದ್ದಾರೆ. ಮನೆ ಮನೆಗೆ ತೆರಳಿ ಶಂಕರ್ ಬೆಂಬಲಿಗರು ಕೂಪನ್ ನೀಡುತ್ತಿದ್ದು, ಅದನ್ನು ನಿಗದಿತ ಅಂಗಡಿಯಲ್ಲಿ ತೋರಿಸಿದರೆ ಕುಕ್ಕರ್ ಉಚಿತ ಸಿಗುತ್ತದೆ.
"ಸದಾ ನಿಮ್ಮ ಸೇವೆಗಾಗಿ ನಿಮ್ಮ ಮನೆ ಮಗ ಆರ್ ಶಂಕರ್" ಅಂತ ಕುಕ್ಕರ್ ಮೇಲೆ ಬರೆದಿದ್ದು ಅದನ್ನು ರಹಸ್ಯವಾಗಿ ಹಂಚಿಕೆ ಮಾಡಲಾಗುತ್ತಿದೆ. ಬಿಜೆಪಿ ಎಂ.ಎಲ್ ಸಿ, ಮಾಜಿ ಸಚಿವ ಆರ್ ಶಂಕರ್ ಈ ಬಾರಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಮತ್ತೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಕ್ಕರೆ ಓಕೆ, ಇಲ್ಲದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ರೆಡಿಯಾಗಿದ್ದಾರೆ.

ಈ ನಡುವೆ, ಆರ್. ಶಂಕರ್ ಕಾಂಗ್ರೆಸ್ ಸೇರ್ತಾರೆ ಅನ್ನೋ ಸುದ್ದಿಯೂ ಜೋರಾಗೇ ಹರಿದಾಡ್ತಿದೆ. ಕಳೆದ 2018 ರ ವಿಧಾನ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದ ಹೆಸರಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಚುನಾವಣೆ ಬಳಿಕ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿದ್ದಾಗ ಶಂಕರ್ ಬೆಂಬಲ ನೀಡಲು ಮುಂದಾಗಿದ್ದರು. ಆದರೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅದೇ ದಿನ ಸಾಯಂಕಾಲ ಕೆಪಿಸಿಸಿ ಕಚೇರಿಗೆ ಹೋಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಲ್ಲದೆ, ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆಗೆ ವಿಲೀನಗೊಳಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಅಬಕಾರಿ ಸಚಿವ ಖಾತೆಯನ್ನೂ ಪಡೆದಿದ್ದರು. ಆದರೆ, ಬಳಿಕ ಬಿಜೆಪಿ ದಾಳಕ್ಕೆ ಸಿಲುಕಿ ಆಪರೇಷನ್ ಕಮಲಕ್ಕೊಳಗಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಶಂಕರ್ ಬಿಜೆಪಿಗೆ ಸೇರ್ಪಡೆಗೊಂಡರೂ ಉಪ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಕ್ಕಿರಲಿಲ್ಲ. ಯಡಿಯೂರಪ್ಪ ಮಾತ್ರ ಅವರನ್ನು ಸಚಿವರನ್ನಾಗಿಸುವ ನೀಡಿದ್ದಲ್ಲದೆ, ವಿಧಾನ ಪರಿಷತ್ ಸದಸ್ಯನಾಗಿ ಮಾಡಿದ್ದರು. ಆದರೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದರು.
ಹೀಗಾಗಿ ಅತ್ತಲೂ ಇಲ್ಲ ಇತ್ತಲೂ ಎಂಬಂತಾಗಿ ರಾಜಕೀಯ ದಾಳಕ್ಕೆ ಸಿಲುಕಿ ಕಂಗಾಲಾಗಿದ್ದರು. ಇದೀಗ ಮತ್ತೆ ರಾಣೆಬೆನ್ನೂರು ಅಖಾಡಕ್ಕೆ ಧುಮುಕಲು ಶಂಕರ್ ರೆಡಿಯಾಗಿದ್ದು ಕಾಂಗ್ರೆಸ್, ಬಿಜೆಪಿ ಯಾರು ಸೀಟು ಕೊಟ್ಡರೂ ಸೈ ಎನ್ನುವ ಇರಾದೆಯಲ್ಲಿದ್ದಾರೆ. ಎಲ್ಲಿಯೂ ಸಿಗದಿದ್ದರೆ ಪಕ್ಷೇತರನಾಗಿಯೇ ಸ್ಪರ್ಧಿಸುವ ಇಂಗಿತ ಹೊಂದಿದ್ದಾರೆ.
Cooker politics, R Shankar distributes free cooker with his pictures to voters in Haveri.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm