ಬ್ರೇಕಿಂಗ್ ನ್ಯೂಸ್
23-01-23 05:22 pm HK News Desk ಕರ್ನಾಟಕ
ಹಾವೇರಿ, ಜ.23: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳಿಗೆ ಈಗ ಮತದಾರನೇ ಮನೆ ದೇವರು. ಹೇಗಾದರೂ ಮತ್ತೆ ಗೆದ್ದು ಬರಬೇಕೆಂಬ ಗುಂಗಿನಲ್ಲಿ ಮತದಾರನ ಓಲೈಕೆಗೆ ತೊಡಗಿದ್ದಾರೆ. ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ ಪಕ್ಷೇತರ ಶಾಸಕ, ಮಾಜಿ ಸಚಿವ ಆರ್.ಶಂಕರ್ ಮತದಾರರಿಗೆ ಕುಕ್ಕರ್ ಕೊಡಲು ಶುರು ಮಾಡಿದ್ದಾರೆ.
ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರದ ಜನತೆಗೆ ಆರ್. ಶಂಕರ್ ಕುಕ್ಕರ್ ಗಿಫ್ಟ್ ಕೊಟ್ಟಿದ್ದಾರೆ. ಮನೆ ಮನೆಗೆ ತೆರಳಿ ಶಂಕರ್ ಬೆಂಬಲಿಗರು ಕೂಪನ್ ನೀಡುತ್ತಿದ್ದು, ಅದನ್ನು ನಿಗದಿತ ಅಂಗಡಿಯಲ್ಲಿ ತೋರಿಸಿದರೆ ಕುಕ್ಕರ್ ಉಚಿತ ಸಿಗುತ್ತದೆ.
"ಸದಾ ನಿಮ್ಮ ಸೇವೆಗಾಗಿ ನಿಮ್ಮ ಮನೆ ಮಗ ಆರ್ ಶಂಕರ್" ಅಂತ ಕುಕ್ಕರ್ ಮೇಲೆ ಬರೆದಿದ್ದು ಅದನ್ನು ರಹಸ್ಯವಾಗಿ ಹಂಚಿಕೆ ಮಾಡಲಾಗುತ್ತಿದೆ. ಬಿಜೆಪಿ ಎಂ.ಎಲ್ ಸಿ, ಮಾಜಿ ಸಚಿವ ಆರ್ ಶಂಕರ್ ಈ ಬಾರಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಮತ್ತೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಕ್ಕರೆ ಓಕೆ, ಇಲ್ಲದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ರೆಡಿಯಾಗಿದ್ದಾರೆ.

ಈ ನಡುವೆ, ಆರ್. ಶಂಕರ್ ಕಾಂಗ್ರೆಸ್ ಸೇರ್ತಾರೆ ಅನ್ನೋ ಸುದ್ದಿಯೂ ಜೋರಾಗೇ ಹರಿದಾಡ್ತಿದೆ. ಕಳೆದ 2018 ರ ವಿಧಾನ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದ ಹೆಸರಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಚುನಾವಣೆ ಬಳಿಕ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿದ್ದಾಗ ಶಂಕರ್ ಬೆಂಬಲ ನೀಡಲು ಮುಂದಾಗಿದ್ದರು. ಆದರೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅದೇ ದಿನ ಸಾಯಂಕಾಲ ಕೆಪಿಸಿಸಿ ಕಚೇರಿಗೆ ಹೋಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಲ್ಲದೆ, ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆಗೆ ವಿಲೀನಗೊಳಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಅಬಕಾರಿ ಸಚಿವ ಖಾತೆಯನ್ನೂ ಪಡೆದಿದ್ದರು. ಆದರೆ, ಬಳಿಕ ಬಿಜೆಪಿ ದಾಳಕ್ಕೆ ಸಿಲುಕಿ ಆಪರೇಷನ್ ಕಮಲಕ್ಕೊಳಗಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಶಂಕರ್ ಬಿಜೆಪಿಗೆ ಸೇರ್ಪಡೆಗೊಂಡರೂ ಉಪ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಕ್ಕಿರಲಿಲ್ಲ. ಯಡಿಯೂರಪ್ಪ ಮಾತ್ರ ಅವರನ್ನು ಸಚಿವರನ್ನಾಗಿಸುವ ನೀಡಿದ್ದಲ್ಲದೆ, ವಿಧಾನ ಪರಿಷತ್ ಸದಸ್ಯನಾಗಿ ಮಾಡಿದ್ದರು. ಆದರೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದರು.
ಹೀಗಾಗಿ ಅತ್ತಲೂ ಇಲ್ಲ ಇತ್ತಲೂ ಎಂಬಂತಾಗಿ ರಾಜಕೀಯ ದಾಳಕ್ಕೆ ಸಿಲುಕಿ ಕಂಗಾಲಾಗಿದ್ದರು. ಇದೀಗ ಮತ್ತೆ ರಾಣೆಬೆನ್ನೂರು ಅಖಾಡಕ್ಕೆ ಧುಮುಕಲು ಶಂಕರ್ ರೆಡಿಯಾಗಿದ್ದು ಕಾಂಗ್ರೆಸ್, ಬಿಜೆಪಿ ಯಾರು ಸೀಟು ಕೊಟ್ಡರೂ ಸೈ ಎನ್ನುವ ಇರಾದೆಯಲ್ಲಿದ್ದಾರೆ. ಎಲ್ಲಿಯೂ ಸಿಗದಿದ್ದರೆ ಪಕ್ಷೇತರನಾಗಿಯೇ ಸ್ಪರ್ಧಿಸುವ ಇಂಗಿತ ಹೊಂದಿದ್ದಾರೆ.
Cooker politics, R Shankar distributes free cooker with his pictures to voters in Haveri.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm