ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm