ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm