ಬ್ರೇಕಿಂಗ್ ನ್ಯೂಸ್
25-01-23 01:42 pm HK News Desk ಕರ್ನಾಟಕ
ಮೈಸೂರು, ಜ.25 : ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ 'ಕೊಲಿಜಿಯಂ'ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವು ದುರುದ್ದೇಶಪೂರಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ' ಎಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು.
ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ ಸ್ವಾಯತ್ತತೆಗೆ ಧಕ್ಕೆ ತರುವಂಥದ್ದು ಎಂದು ಅಭಿಪ್ರಾಯಪಟ್ಟರು.
ಕೊಲಿಜಿಯಂ ಶಿಫಾರಸ್ಸು ಮಾಡಿದ ಬಳಿಕ ನ್ಯಾಯಮೂರ್ತಿಗಳ ವೈಯಕ್ತಿಕ ವಿಚಾರಗಳನ್ನು ಪರಿಗಣಿಸಿ ಕೇಂದ್ರ ನಿರಾಕರಿಸಿರುವುದು ತಪ್ಪು. ಒಬ್ಬ ಮನುಷ್ಯನ ವೈಯಕ್ತಿಕ ಜೀವನವನ್ನು ಆಡಳಿತ ದೃಷ್ಟಿಯಲ್ಲಿ ನೋಡಲಾಗದು. ಪ್ರಚಂಡ ಬಹುಮತವುಳ್ಳ ಸರ್ಕಾರದ ತಪ್ಪು ನಿರ್ಧಾರಗಳನ್ನು ಪ್ರಶ್ನಿಸಲು, ಸಂವಿಧಾನವನ್ನು ಎತ್ತಿಹಿಡಿಯಲು ನ್ಯಾಯಾಂಗಕ್ಕೆ ತನ್ನದೇ ಆಯ್ಕೆ ಪ್ರಕ್ರಿಯೆ ಮುಖ್ಯ' ಎಂದರು.
'ಸಚಿವರನ್ನು ನೇಮಿಸಿಕೊಳ್ಳುವ ಪ್ರಧಾನಿಯನ್ನು ಯಾರಾದರೂ ಪ್ರಶ್ನಿಸುತ್ತಾರೆಯೇ? ಆದರೆ, ಕೊಲಿಜಿಯಂನಲ್ಲಿ ನ್ಯಾಯಾಧೀಶರ ಗುಂಪು ಬಹುಮತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಅಷ್ಟರ ಮಟ್ಟಿಗೆ ಅದು ಪಾರದರ್ಶಕ ಹಾಗೂ ಉತ್ತಮ ವ್ಯವಸ್ಥೆ ಎಂದು ಹೇಳಿದರು.
It is absolutely arbitrary: Ex-HC judge on collegium system says Santosh Hedge in Mysuru.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 09:07 pm
HK News Staffer
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm