ಬ್ರೇಕಿಂಗ್ ನ್ಯೂಸ್
25-01-23 10:18 pm HK News Desk ಕರ್ನಾಟಕ
ಬೆಳಗಾವಿ, ಜ.25 : ರಾಜ್ಯದಲ್ಲಿ ಮತ್ತೆ ಸೀಡಿ ವಾರ್ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಮಾಜಿ ಸಚಿವ, ಸಿಡಿ ಪ್ರಕರಣದ ಸಂತ್ರಸ್ತ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ನನ್ನ ಖಾಸಗಿ ವಿಡಿಯೋ ಸೇರಿದಂತೆ ಇನ್ನೂ ಹತ್ತಾರು ಜನರ 110ಕ್ಕೂ ಹೆಚ್ಚು ಸಿ.ಡಿ.ಗಳನ್ನು ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾನೆ. ಹಾಗಾಗಿ, ಈ ಸಿ.ಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಮಿತ್ ಷಾ ಜೊತೆಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
‘ನನ್ನ ಸಿ.ಡಿ ಪ್ರಕರಣದಲ್ಲಿ ಈ ‘ಮಹಾನ್ ನಾಯಕ’ ಇರುವುದು ಖಚಿತ. ಆರೋಪಿಯೊಬ್ಬನ ದೇವನಹಳ್ಳಿಯ ಮನೆಯಲ್ಲಿ ತನಿಖೆ ನಡೆದಾಗ ಹಲವು ಸಿ.ಡಿಗಳು ಸಿಕ್ಕಿವೆ. ನನ್ನ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿ.ಡಿ ಕೂಡ ಸಿಕ್ಕಿದೆ. ಇದೆಲ್ಲವನ್ನೂ ಮುಚ್ಚಿಡಲಾಗಿದೆ. ನನ್ನ ವೈಯಕ್ತಿಕ ಜೀವನ ಹಾಳಾದಂತೆ ಬೇರೊಬ್ಬರಿಗೆ ಆಗಬಾರದು ಎಂಬ ಕಾರಣಕ್ಕೆ ಇದನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತೇನೆ ಎಂದಿದ್ದಾರೆ.

ಆಮಿಷ ಒಡ್ಡಿಲ್ಲ, ಸಹಾಯ ಕೊಡ್ತೇನೆಂದಿದ್ದು..
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ₹10 ಕೋಟಿ ಖರ್ಚು ಮಾಡುತ್ತೇನೆ, ಮತದಾರರಿಗೆ ತಲಾ ₹6,000 ಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾಗಿ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ನಾನು ಯಾವುದೇ ಆಮಿಷ ಒಡ್ಡಿಲ್ಲ. ನಮ್ಮ ಯಾವ ಅಭ್ಯರ್ಥಿಯ ಹೆಸರೂ ಹೇಳಿಲ್ಲ. ಈಗ ನೀತಿ ಸಂಹಿತೆ ಕೂಡ ಇಲ್ಲ. ಮಾತಿನ ಆವೇಶದಲ್ಲಿ ಖರ್ಚು ಮಾಡುತ್ತೇನೆ ಎಂದಿರಬಹುದು. ಈ ಕ್ಷೇತ್ರದ ಶಾಲೆ ಸುಧಾರಣೆ, ರೈತರು, ಬಡವರಿಗೆ ಆರೋಗ್ಯ ಸೌಕರ್ಯ ನೀಡುವ ಉದ್ದೇಶದಿಂದ ಹೇಳಿದ್ದೇನೆ ಹೊರತು ಲಂಚ ಕೊಡುತ್ತೇನೆಂದಲ್ಲ ಎಂದು ಸಮರ್ಥಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಆತನಿಗೆ ಪ್ಯಾಂಟ್ ಬಿಚ್ಚು ಅಂತ ನಾನು ಹೇಳಿದ್ನಾ.. ಹತ್ತು ಸಾವಿರ ಕೊಡುತ್ತೇನೆ ಎನ್ನಲು ನಾನು ಹೇಳಿದ್ದಾ.. ಎಲ್ಲಿ ಬೇಕಾದರು ಹೋಗಲಿ, ಏನು ಸಿಬಿಐ ತನಿಖೆನಾದ್ರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
DK Shivakumar has more than 110 CDS says Ramesh Jarkiholi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm