ಬ್ರೇಕಿಂಗ್ ನ್ಯೂಸ್
25-01-23 10:18 pm HK News Desk ಕರ್ನಾಟಕ
ಬೆಳಗಾವಿ, ಜ.25 : ರಾಜ್ಯದಲ್ಲಿ ಮತ್ತೆ ಸೀಡಿ ವಾರ್ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಮಾಜಿ ಸಚಿವ, ಸಿಡಿ ಪ್ರಕರಣದ ಸಂತ್ರಸ್ತ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ನನ್ನ ಖಾಸಗಿ ವಿಡಿಯೋ ಸೇರಿದಂತೆ ಇನ್ನೂ ಹತ್ತಾರು ಜನರ 110ಕ್ಕೂ ಹೆಚ್ಚು ಸಿ.ಡಿ.ಗಳನ್ನು ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾನೆ. ಹಾಗಾಗಿ, ಈ ಸಿ.ಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಮಿತ್ ಷಾ ಜೊತೆಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
‘ನನ್ನ ಸಿ.ಡಿ ಪ್ರಕರಣದಲ್ಲಿ ಈ ‘ಮಹಾನ್ ನಾಯಕ’ ಇರುವುದು ಖಚಿತ. ಆರೋಪಿಯೊಬ್ಬನ ದೇವನಹಳ್ಳಿಯ ಮನೆಯಲ್ಲಿ ತನಿಖೆ ನಡೆದಾಗ ಹಲವು ಸಿ.ಡಿಗಳು ಸಿಕ್ಕಿವೆ. ನನ್ನ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿ.ಡಿ ಕೂಡ ಸಿಕ್ಕಿದೆ. ಇದೆಲ್ಲವನ್ನೂ ಮುಚ್ಚಿಡಲಾಗಿದೆ. ನನ್ನ ವೈಯಕ್ತಿಕ ಜೀವನ ಹಾಳಾದಂತೆ ಬೇರೊಬ್ಬರಿಗೆ ಆಗಬಾರದು ಎಂಬ ಕಾರಣಕ್ಕೆ ಇದನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತೇನೆ ಎಂದಿದ್ದಾರೆ.
ಆಮಿಷ ಒಡ್ಡಿಲ್ಲ, ಸಹಾಯ ಕೊಡ್ತೇನೆಂದಿದ್ದು..
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ₹10 ಕೋಟಿ ಖರ್ಚು ಮಾಡುತ್ತೇನೆ, ಮತದಾರರಿಗೆ ತಲಾ ₹6,000 ಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾಗಿ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ನಾನು ಯಾವುದೇ ಆಮಿಷ ಒಡ್ಡಿಲ್ಲ. ನಮ್ಮ ಯಾವ ಅಭ್ಯರ್ಥಿಯ ಹೆಸರೂ ಹೇಳಿಲ್ಲ. ಈಗ ನೀತಿ ಸಂಹಿತೆ ಕೂಡ ಇಲ್ಲ. ಮಾತಿನ ಆವೇಶದಲ್ಲಿ ಖರ್ಚು ಮಾಡುತ್ತೇನೆ ಎಂದಿರಬಹುದು. ಈ ಕ್ಷೇತ್ರದ ಶಾಲೆ ಸುಧಾರಣೆ, ರೈತರು, ಬಡವರಿಗೆ ಆರೋಗ್ಯ ಸೌಕರ್ಯ ನೀಡುವ ಉದ್ದೇಶದಿಂದ ಹೇಳಿದ್ದೇನೆ ಹೊರತು ಲಂಚ ಕೊಡುತ್ತೇನೆಂದಲ್ಲ ಎಂದು ಸಮರ್ಥಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಆತನಿಗೆ ಪ್ಯಾಂಟ್ ಬಿಚ್ಚು ಅಂತ ನಾನು ಹೇಳಿದ್ನಾ.. ಹತ್ತು ಸಾವಿರ ಕೊಡುತ್ತೇನೆ ಎನ್ನಲು ನಾನು ಹೇಳಿದ್ದಾ.. ಎಲ್ಲಿ ಬೇಕಾದರು ಹೋಗಲಿ, ಏನು ಸಿಬಿಐ ತನಿಖೆನಾದ್ರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
DK Shivakumar has more than 110 CDS says Ramesh Jarkiholi.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm