ಬ್ರೇಕಿಂಗ್ ನ್ಯೂಸ್
28-01-23 09:33 pm HK News Desk ಕರ್ನಾಟಕ
ಬೆಂಗಳೂರು, ಜ.28 : ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗವೂ ಚುರುಕಾಗಿದೆ. ಚುನಾವಣೆ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ಲೆಕ್ಕಾಚಾರ ಹಾಕಿಕೊಂಡಿದೆ.
ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಕಳೆದ ಬಾರಿ, 2018ರಲ್ಲಿ ಮೇ 12ರಂದು ಮತದಾನ ನಡೆದಿತ್ತು. ಹೆಚ್ಚು ಕಡಿಮೆ ಈ ಬಾರಿಯೂ ಅದೇ ಅವಧಿಯಲ್ಲಿ ಚುನಾವಣೆ ನಡೆಯಬಹುದು.
ಇಡೀ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ 3 ಲಕ್ಷ ಸಿಬಂದಿ ಅಗತ್ಯವಿದ್ದು, ಬಹುತೇಕ ಶಿಕ್ಷಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಮಾ.9ರಿಂದ 29ರ ವರೆಗೆ ದ್ವಿತೀಯ ಪಿಯುಸಿ ಮತ್ತು ಮಾ. 31ರಿಂದ ಎ.15ರ ವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದರ ಬಳಿಕವಷ್ಟೇ ಚುನಾವಣೆ ನಡೆಸಬೇಕಾಗುತ್ತದೆ.
ಇದೇ ವೇಳೆ, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯೋಗ ಸಿದ್ಧಪಡಿಸಿದೆ. ಆದರೂ ಅಂತಿಮ ಮತದಾರರ ಪಟ್ಟಿಯನ್ನು ಇನ್ನೊಮ್ಮೆ ಪರಿಶೀಲಿಸಿ ಲೋಪಗಳಿದ್ದರೆ ಸರಿಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ. ರಾಜಕೀಯ ಪಕ್ಷಗಳಿಗೂ ಮತದಾರರ ಪಟ್ಟಿಯನ್ನು ನೀಡಲಾಗಿದೆ.
ಈ ಬಾರಿ 60 ಸಾವಿರ ಮತಗಟ್ಟೆ ಇರಬಹುದು ಎಂದು ಅಂದಾಜಿಸಲಾಗಿದೆ. ಒಂದು ಮತಗಟ್ಟೆಗೆ ಕನಿಷ್ಟ ಐವರಂತೆ ಒಟ್ಟು 3 ಲಕ್ಷ ಸಿಬಂದಿ ಬೇಕಾಗಬಹುದು. ಅವರ ನಿಯೋಜನೆ ಮತ್ತು ತರಬೇತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Elections expected to be on May 2nd week in Karnataka.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 09:07 pm
HK News Staffer
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm