ಬ್ರೇಕಿಂಗ್ ನ್ಯೂಸ್
28-01-23 09:33 pm HK News Desk ಕರ್ನಾಟಕ
ಬೆಂಗಳೂರು, ಜ.28 : ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗವೂ ಚುರುಕಾಗಿದೆ. ಚುನಾವಣೆ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ಲೆಕ್ಕಾಚಾರ ಹಾಕಿಕೊಂಡಿದೆ.
ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಕಳೆದ ಬಾರಿ, 2018ರಲ್ಲಿ ಮೇ 12ರಂದು ಮತದಾನ ನಡೆದಿತ್ತು. ಹೆಚ್ಚು ಕಡಿಮೆ ಈ ಬಾರಿಯೂ ಅದೇ ಅವಧಿಯಲ್ಲಿ ಚುನಾವಣೆ ನಡೆಯಬಹುದು.
ಇಡೀ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ 3 ಲಕ್ಷ ಸಿಬಂದಿ ಅಗತ್ಯವಿದ್ದು, ಬಹುತೇಕ ಶಿಕ್ಷಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಮಾ.9ರಿಂದ 29ರ ವರೆಗೆ ದ್ವಿತೀಯ ಪಿಯುಸಿ ಮತ್ತು ಮಾ. 31ರಿಂದ ಎ.15ರ ವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದರ ಬಳಿಕವಷ್ಟೇ ಚುನಾವಣೆ ನಡೆಸಬೇಕಾಗುತ್ತದೆ.
ಇದೇ ವೇಳೆ, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯೋಗ ಸಿದ್ಧಪಡಿಸಿದೆ. ಆದರೂ ಅಂತಿಮ ಮತದಾರರ ಪಟ್ಟಿಯನ್ನು ಇನ್ನೊಮ್ಮೆ ಪರಿಶೀಲಿಸಿ ಲೋಪಗಳಿದ್ದರೆ ಸರಿಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ. ರಾಜಕೀಯ ಪಕ್ಷಗಳಿಗೂ ಮತದಾರರ ಪಟ್ಟಿಯನ್ನು ನೀಡಲಾಗಿದೆ.
ಈ ಬಾರಿ 60 ಸಾವಿರ ಮತಗಟ್ಟೆ ಇರಬಹುದು ಎಂದು ಅಂದಾಜಿಸಲಾಗಿದೆ. ಒಂದು ಮತಗಟ್ಟೆಗೆ ಕನಿಷ್ಟ ಐವರಂತೆ ಒಟ್ಟು 3 ಲಕ್ಷ ಸಿಬಂದಿ ಬೇಕಾಗಬಹುದು. ಅವರ ನಿಯೋಜನೆ ಮತ್ತು ತರಬೇತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Elections expected to be on May 2nd week in Karnataka.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm