ಬ್ರೇಕಿಂಗ್ ನ್ಯೂಸ್
28-01-23 09:33 pm HK News Desk ಕರ್ನಾಟಕ
ಬೆಂಗಳೂರು, ಜ.28 : ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗವೂ ಚುರುಕಾಗಿದೆ. ಚುನಾವಣೆ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ಲೆಕ್ಕಾಚಾರ ಹಾಕಿಕೊಂಡಿದೆ.
ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಕಳೆದ ಬಾರಿ, 2018ರಲ್ಲಿ ಮೇ 12ರಂದು ಮತದಾನ ನಡೆದಿತ್ತು. ಹೆಚ್ಚು ಕಡಿಮೆ ಈ ಬಾರಿಯೂ ಅದೇ ಅವಧಿಯಲ್ಲಿ ಚುನಾವಣೆ ನಡೆಯಬಹುದು.
ಇಡೀ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ 3 ಲಕ್ಷ ಸಿಬಂದಿ ಅಗತ್ಯವಿದ್ದು, ಬಹುತೇಕ ಶಿಕ್ಷಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಮಾ.9ರಿಂದ 29ರ ವರೆಗೆ ದ್ವಿತೀಯ ಪಿಯುಸಿ ಮತ್ತು ಮಾ. 31ರಿಂದ ಎ.15ರ ವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದರ ಬಳಿಕವಷ್ಟೇ ಚುನಾವಣೆ ನಡೆಸಬೇಕಾಗುತ್ತದೆ.
ಇದೇ ವೇಳೆ, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯೋಗ ಸಿದ್ಧಪಡಿಸಿದೆ. ಆದರೂ ಅಂತಿಮ ಮತದಾರರ ಪಟ್ಟಿಯನ್ನು ಇನ್ನೊಮ್ಮೆ ಪರಿಶೀಲಿಸಿ ಲೋಪಗಳಿದ್ದರೆ ಸರಿಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ. ರಾಜಕೀಯ ಪಕ್ಷಗಳಿಗೂ ಮತದಾರರ ಪಟ್ಟಿಯನ್ನು ನೀಡಲಾಗಿದೆ.
ಈ ಬಾರಿ 60 ಸಾವಿರ ಮತಗಟ್ಟೆ ಇರಬಹುದು ಎಂದು ಅಂದಾಜಿಸಲಾಗಿದೆ. ಒಂದು ಮತಗಟ್ಟೆಗೆ ಕನಿಷ್ಟ ಐವರಂತೆ ಒಟ್ಟು 3 ಲಕ್ಷ ಸಿಬಂದಿ ಬೇಕಾಗಬಹುದು. ಅವರ ನಿಯೋಜನೆ ಮತ್ತು ತರಬೇತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Elections expected to be on May 2nd week in Karnataka.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm