ಬ್ರೇಕಿಂಗ್ ನ್ಯೂಸ್
19-10-20 05:41 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19 : ಸಿಎಂ ಬಿಎಸ್ ಯಡಿಯೂರಪ್ಪ ಸ್ವಕ್ಷೇತ್ರ ಶಿಕಾರಿಪುರ ಪ್ರವಾಸದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಜನರು ತತ್ತರಿಸಿದ್ದಾರೆ. ನಾಡಿದ್ದು ಸಿಎಂ ವೈಮಾನಿಕ ಸಮೀಕ್ಷೆ ಮಾಡ್ತಾರೆ ಅಂತ ನೋಡಿದ್ದೇನೆ. ಸಿಎಂಗೆ ಹೃದಯದಲ್ಲಿ ಗಾಂಭೀರ್ಯ ಇದ್ದಿದ್ದರೆ ಶಿಕಾರಿಪುರಕ್ಕೆ ಹೋಗೋ ಬದಲು ಅಲ್ಲಿಗೆ ಹೋಗಬೇಕಿತ್ತು. ಊರು ಹೊತ್ತಿಕೊಂಡು ಉರಿಯುತ್ತಿದೆ, ಜಿಲ್ಲೆಗಳು ನೀರಿನಲ್ಲಿ ಮುಳುಗಿದೆ. ಪರಿಸ್ಥಿತಿ ಹೀಗಿದ್ದರೂ ಶಿಕಾರಿಪುರಕ್ಕೆ ಹೋಗಿ ಸಿಎಂ ಕುಳಿತಿದ್ದಾರೆ ಎಂದು ಎಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಬಿಎಸ್ವೈ ಶಿಕಾರಿಪುರವನ್ನು ಮಾಡಲ್ ಮಾಡಲು ಹೊರಟಿದ್ದಾರೆ. ಹಿಂದೆ ನಾನು ಬಜೆಟ್ ಮಂಡನೆ ಮಾಡಿದ್ದಾಗ ರಾಮನಗರ, ಮಂಡ್ಯ ಬಜೆಟ್ ಅಂದ್ರು, ಇವಾಗ ಯಡಿಯೂರಪ್ಪ ಏನು ಶಿಕಾರಿಪುರದ ಸಿಎಂ ಆಗಿದ್ದಾರಾ...? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಬಿಎಸ್ವೈ ವಿರುದ್ಧ ಸಿಡಿದಿದ್ದೆರು. ಜನರಿಗೆ ಈ ಸರ್ಕಾರ ಸ್ಪಂದನೆ ಮಾಡ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಮಳೆ ಬಂದು ಸಂತ್ರಸ್ತರು ನರಳುತ್ತಿದ್ದಾರೆ. ಸಹಾಯ ಮಾಡುವ ಕನಿಷ್ಠ ಸೌಜನ್ಯ ಕೂಡ ಈ ಸರ್ಕಾರಕ್ಕೆ ಇಲ್ಲ. ಯಾವ ಮಂತ್ರಿಗೂ ಜವಾಬ್ದಾರಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯವರು ಚುನಾವಣೆಗೆ ಕೋಟಿ ಕೋಟಿ ಹಣ ಖರ್ಚು ಮಾಡ್ತಿದ್ದಾರೆ. ಪಾಪದ ಹಣ ತಗೊಂಡು ಹೋಗಿ ಶಿರಾ ಚುನಾವಣೆ ಮಾಡ್ತಿದ್ದೀರಾ? ಆ ಹಣವನ್ನ ಸಿಎಂ ಮಾಡಲು ಸ್ಥಾನ ಕೊಟ್ಟ ಜನರಿಗೆ ಕೊಡಿ. ಸರ್ಕಾರದ ಪರಿಹಾರಕ್ಕೆ ನಾನು ಕಾಯಲ್ಲ. ಬುಧವಾರ ಪ್ರವಾಹ ಪ್ರದೇಶಕ್ಕೆ ನಾನೇ ಅಕ್ಕಿ, ಬೇಳೆ, ಬಟ್ಟೆ ಕಳಿಸ್ತಿದ್ದೇನೆ. ನನ್ನ ಕರ್ತವ್ಯ ನಾನು ಮಾಡ್ತಿದ್ದೇನೆ. ಆ ಭಾಗದ ಜನ ಮತ ಕೊಡದೇ ಹೋದ್ರು ನನ್ನ ಪ್ರಾಮಾಣಿಕ ಹಣದಲ್ಲಿ ಸಹಾಯ ಮಾಡ್ತಿದ್ದೇನೆ. ಬುಧವಾರ ಎಲ್ಲ ಸಾಮಗ್ರಿಗಳನ್ನು ನಮ್ಮ ಪಕ್ಷದಿಂದ ಕೊಡ್ತಿದ್ದೇವೆ ಎಂದರು.
ಇದೇ ವೇಳೆ, ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಕಿಡಿಕಾರಿದ ಎಚ್ಡಿಕೆ, ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಸಿಎಂ ಪುತ್ರ ಹೇಳಿದ್ದಾರೆ. ಅವರು ಜನರಿಗೆ ಕುಡಿಸಿ ಬೀದಿ ಬೀದಿಯಲ್ಲಿ ಮಲಗಿಸಿದ್ದಾರೆ. ಇದು ಮಾಧ್ಯಮಗಳಲ್ಲೇ ಬಂದಿದೆ. ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. ಅದೇ ದುಡ್ಡನ್ನು ತಗೊಂಡು ಹೋಗಿ ಬೀದಿಯಲ್ಲಿ ಇರುವ ಜನರಿಗೆ ಕೊಡಬೇಕಿತ್ತು ಎಂದು ಆಕ್ರೋಶ ಹೊರಹಾಕಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm