ಬ್ರೇಕಿಂಗ್ ನ್ಯೂಸ್
03-02-23 11:49 am HK News Desk ಕರ್ನಾಟಕ
ಹಾಸನ, ಫೆ.3: ರಾಷ್ಟ್ರೀಯ ಹೆದ್ದಾರಿ 75ರ ಹಾಸನ- ಸಕಲೇಶಪುರ - ಮಾರನಹಳ್ಳಿ ವಿಭಾಗದ ಚತುಷ್ಪಥ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಮಳೆಗಾಲದ ನಂತರವಷ್ಟೇ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ನಿತಿನ್ ಗಡ್ಕರಿ, ಸುಮಾರು 45 ಕಿ.ಮೀ ಉದ್ದದ ರಸ್ತೆ ಯೋಜನೆಯಲ್ಲಿ 30 ಕಿ.ಮೀ.ನಲ್ಲಿ ಚತುಷ್ಪಥ ಕಾಮಗಾರಿ ಪೂರ್ಣಗೊಂಡಿದೆ. ಇನ್ನೊಂದು 5 ಕಿಮೀ ವಿಸ್ತರಣೆಯನ್ನು ಜೂನ್, 2023ರೊಳಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. ನಿರ್ಬಂಧಿತ ಅಗಲದಿಂದಾಗಿ 10 ಕಿಮೀ ವಿಸ್ತರಣೆಗೆ ರಸ್ತೆಯನ್ನು ಮುಚ್ಚುವ ಅಗತ್ಯವಿದೆ. ಇದನ್ನು ಮಳೆಗಾಲದ ನಂತರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಸ್ತೆಯನ್ನು ಸುಸ್ಥಿತಿಯಲ್ಲಿಡಲು 2023ರ ಜ.9ರಂದು ಸಕಲೇಶಪುರ- ಮಾರನಹಳ್ಳಿ ನಡುವೆ 10 ಕಿಮೀ ಉದ್ದದ ನಿರ್ವಹಣಾ ಕಾಮಗಾರಿಗೆ ಮಂಜೂರಾತಿ ನೀಡಲಾಗಿದ್ದು, ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಹಾಸನ- ಮಾರನಹಳ್ಳಿ ರಸ್ತೆ ನಿರ್ಮಾಣಕ್ಕೆ ಅರಣ್ಯ ಭೂಮಿ ಸೇರಿದಂತೆ ಭೂಮಿಯನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಮುಖ್ಯ ಗುತ್ತಿಗೆದಾರರ ದಿವಾಳಿತನ ಪ್ರಕ್ರಿಯೆ, ಬ್ಲಾಸ್ಟಿಂಗ್ ಅನುಮತಿಯಲ್ಲಿ ವಿಳಂಬ, ಭಾರೀ ಮಳೆ, ಕೋವಿಡ್ -19 ಸಾಂಕ್ರಾಮಿಕ ಮತ್ತು ಗುತ್ತಿಗೆದಾರರ ವಿಳಂಬ ಕೆಲಸ ಸೇರಿದಂತೆ ಹಲವಾರು ಕಾರಣಗಳಿಂದ ಯೋಜನೆಯ ಕೆಲಸ ವಿಳಂಬವಾಗಿದೆ ಎಂದು ಗಡ್ಕರಿ ಹೇಳಿದರು.
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರ ಮತ್ತು ಮಾರನಹಳ್ಳಿ ನಡುವೆ 10 ಕಿಲೋಮೀಟರ್ ವ್ಯಾಪ್ತಿಯಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಸಾರ್ವಜನಿಕರ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಕಚೇರಿಯ ಮುಖ್ಯ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) ಡಿಸೆಂಬರ್ 16ರಂದು ಹಾಸನ -ಮಾರನಹಳ್ಳಿ ವಿಭಾಗದ ಹತ್ತು ಕಿಮೀ ರಸ್ತೆ ಅಭಿವೃದ್ಧಿಗೆ ಅಂದಾಜು ₹12 ಕೋಟಿ ವೆಚ್ಚದಲ್ಲಿ ಬಿಡ್ ಆಹ್ವಾನಿಸಿದ್ದರು.
Union Road Transport Minister Nitin Gadkari on Thursday said that the work on four-laning of Hassan-Sakleshpur-Maranahalli section of National Highway (NH) - 75 had been taken up and it would be completed after monsoon.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm