ಬ್ರೇಕಿಂಗ್ ನ್ಯೂಸ್
03-02-23 06:33 pm HK News Desk ಕರ್ನಾಟಕ
ಮಂಡ್ಯ, ಫೆ.3: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಮಂದಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಆ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಅಸ್ವಸ್ಥರಾಗಿರುವ 6 ಮಂದಿಯನ್ನು ಮಂಡ್ಯದ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಮಂಗಳಮ್ಮ (28) ಮೃತ ಮಹಿಳೆ. ಆಕೆಯ ಪತಿ ರಾಜು (31), ಆಕೆಯ ತಾಯಿ ಸೊಮ್ಮಪುರದಮ್ಮ (48), ಮಕ್ಕಳಾದ ಆಕಾಶ್ (9), ಕೃಷ್ಣ (13), ಮಂಗಳಮ್ಮನ ಸಹೋದರಿ ಸವಿತಾ (24), ಸವಿತಾ ಪುತ್ರಿ ದರ್ಶಿನಿ (4) ಗಂಭೀರ ಸ್ಥಿತಿಯಲ್ಲಿದ್ದಾರೆ. ಬೆಂಗಳೂರಿನ ಸುಬ್ಬಪ್ಪನಪಾಳ್ಯದಲ್ಲಿ ವಾಸವಾಗಿದ್ದ ರಾಜು, ಕೂಲಿ ಕಾರ್ಮಿಕನಾಗಿದ್ದು, 11 ಲಕ್ಷಕ್ಕೂ ಹೆಚ್ಚಿನ ಸಾಲ ಮಾಡಿಕೊಂಡಿದ್ದರು. ಇತ್ತೀಚೆಗೆ ಸಾಲಗಾರರ ಕಾಟ ಹೆಚ್ಚಾಗಿತ್ತು.


ಸಾಲಗಾರರಿಗೆ ಹೆದರಿ ಸುಬ್ರಪ್ಪನಪಾಳ್ಯ ಬಿಟ್ಟು ರಾಮನಗರದ ದೊಡ್ಡ ಮಣ್ಣುಗುಡ್ಡೆ ಗ್ರಾಮದಲ್ಲಿರುವ ಸೋದರತ್ತೆ ಮನೆಯಲ್ಲಿ ವಾಸವಿದ್ದರು. ಅಲ್ಲಿಯೂ ಸಾಲಕ್ಕೆ ಪೀಡಿಸುತ್ತಿದ್ದರಿಂದ ಬೇಸತ್ತ ರಾಜು ಮನೆಯಲ್ಲಿ ಊಟಕ್ಕೇ ಇಲಿ ಪಾಷಾಣ ಬೆರೆಸಿದ್ದ. ಊಟ ಮಾಡಿದ್ದ ಮಂಗಳಮ್ಮ ಮನೆಯಲ್ಲೇ ಮೃತಪಟ್ಟಿದ್ದು ಉಳಿದವರು ಅಸ್ವಸ್ಥರಾಗಿದ್ದಾರೆ. ಮಧ್ಯಾಹ್ನ 2.30ರ ವೇಳೆ ಎಲ್ಲರೂ ಊಟ ಮಾಡಿದ್ದರು. ಊಟದ ಬಳಿಕ ಸಕ್ಕರೆ ಅಚ್ಚು, ಬಾಳೆ ಹಣ್ಣು ಸೇವಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದು, ಮಂಗಳಮ್ಮ ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದ ನೆರೆಹೊರೆಯವರು ತಕ್ಷಣವೇ ಅವರೆಲ್ಲರನ್ನೂ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ಗೆ ದಾಖಲು ಮಾಡಲಾಯಿತು.
A woman died while six others members of her family are critical after attempting suicide by consuming rat poison due to financial crisis, at Dodda Mannugudde in Ramanagara taluk on Thursday. The incident was under the jurisdiction of Ramanagara rural police station.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm