ಬ್ರೇಕಿಂಗ್ ನ್ಯೂಸ್
04-02-23 02:23 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿ ಆಗಿಯೂ ಕೆಲಸ ಮಾಡಿದ ಅನುಭವ ಇರುವ ಧರ್ಮೇಂದ್ರ ಪ್ರಧಾನ್ ಅವರಿಗೆ ಚುನಾವಣಾ ಉಸ್ತುವಾರಿಯನ್ನು ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶನಿವಾರ ಅಧಿಕೃತ ಆದೇಶವನ್ನು ಮಾಡಿದ್ದು, ಈ ಚುನಾವಣೆಯಲ್ಲಿ ಕರ್ನಾಟಕದ ಚುನಾವಣಾ ಉಸ್ತುವಾರಿಯನ್ನು ಧರ್ಮೇಂದ್ರ ಪ್ರಧಾನ್ ಹೊತ್ತುಕೊಳ್ಳಲಿದ್ದಾರೆ. ಇನ್ನು, ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ಕರ್ನಾಟಕ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನಿಯೋಜನೆ ಮಾಡಲಾಗಿದೆ. ಅಣ್ಣಾಮಲೈ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿಯೂ ಕೆಲಸ ಮಾಡಿದ್ದರು. ಈ ನಿಟ್ಟಿನಲ್ಲಿ ಅವರಿಗೆ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಧರ್ಮೇಂದ್ರ ಪ್ರಧಾನ್ ಯಾರು?
ಒಡಿಶಾ ಮೂಲದವರಾಗಿರುವ ಧರ್ಮೇಂದ್ರ ಪ್ರಧಾನ್ 2000ನೇ ಇಸವಿಯಲ್ಲಿ ಒಡಿಶಾ ವಿಧಾನಸಭೆಯ ಶಾಸಕರಾಗುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು. ಅದಾದ ಬಳಿಕ 2004ರಲ್ಲಿ ಒಡಿಶಾದ ದಿಯೋಗರ್ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ನಂತರ ಛತ್ತೀಸ್ಗಢದ ರಾಜ್ಯ ಬಿಜೆಪಿ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಅವರನ್ನು 2007ರಲ್ಲಿ ನೇಮಿಸಲಾಗಿತ್ತು. ಬಳಿಕ ಬಿಜೆಪಿ ಉತ್ತರಾಖಂಡದ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಧರ್ಮೇಂದ್ರ ಪ್ರಧಾನ್, ಬಿಹಾರ ಚುನಾವಣೆ ವೇಳೆ ಬಿಜೆಪಿ ಸಹ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಅಣ್ಣಾಮಲೈ ಯಾರು?
ಸದ್ಯ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಕೆ ಅಣ್ಣಾಮಲೈ, 2011ರಲ್ಲಿ ಭಾರತೀಯ ಪೊಲೀಸ್ ಸೇವೆ ಸೇರಿದ್ದು, 2013ರ ಸೆಪ್ಟೆಂಬರ್ನಲ್ಲಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಪೊಲೀಸ್ ವೃತ್ತಿಯನ್ನು ಆರಂಭಿಸಿದ್ದರು. ಬಳಿಕ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಡ್ತಿ ಪಡೆದ ಅವರು 2015 ರಿಂದ 2016ರವರೆಗೆ ಉಡುಪಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಚಿಕ್ಕಮಗಳೂರು ಎಸ್ಪಿಯಾಗಿದ್ದ ಅವರು 2018ರಲ್ಲಿ ಬೆಂಗಳೂರು ದಕ್ಷಿಣ ಪೊಲೀಸ್ ಉಪ ಆಯುಕ್ತರಾಗಿ ಬಡ್ತಿ ಹೊಂದಿದ್ದರು. ಆದರೆ, 2019ರಲ್ಲಿ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯವನ್ನು ಪ್ರವೇಶಿಸಿದರು.
ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ಚುನಾವಣಾ ಸಿದ್ದತೆ ನಿಟ್ಟಿನಲ್ಲಿ ಶನಿವಾರ ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರು ಭಾಗಿಯಾಗಿದ್ದರು. ಚುನಾವಣಾ ಸಿದ್ದತೆ, ಸಂಘಟನೆ ಹಾಗೂ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
With the BJP preparing for a fierce battle to retain its southern bastion of Karnataka, party national president J P Nadda on Saturday appointed Union Education Minister Dharmendra Pradhan as its election in-charge, with BJP Tamil Nadu state chief K Annamalai as co-in-charge.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm