ಬ್ರೇಕಿಂಗ್ ನ್ಯೂಸ್
04-02-23 05:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4 : ಕೇಂದ್ರ ಗೃಹ ಸಚಿವ ಅಮಿತ್ ಷಾ ಸಿಡಿ ಮಾಡೋದ್ರಲ್ಲಿ ಎಕ್ಸ್ಪರ್ಟ್ ಇದ್ದಾರೆ. ಗುಜರಾತಿನಲ್ಲೂ ಸಿಡಿ ಪ್ರಯೋಗ ಮಾಡಿದ್ದರು. ಅದಕ್ಕಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಮಿತ್ ಷಾ ಭೇಟಿಗೆ ದೆಹಲಿಗೆ ಹೋಗಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಮಿತ್ ಶಾ ಸಿಡಿ ಎಕ್ಸ್ಪರ್ಟ್, ಗುಜರಾತ್ ಉಸ್ತುವಾರಿ ಆಗಿದ್ದ ಸಂಜಯ್ ಜೋಶಿಯವರ ಸಿಡಿ ಮಾಡಿಸಿದ್ದರು. ಹಾಗಾಗಿ ರಮೇಶ್ ಜಾರಕಿಹೊಳಿ ಬಳಿ ಸಲಹೆ ಕೇಳಲು ಅಲ್ಲಿಗೆ ಹೋಗಿರಬೇಕು ಎಂದು ರಮೇಶ್ ಜಾರಕಿಹೊಳಿ ಹಾಗೂ ಅಮಿತ್ ಶಾ ಭೇಟಿ ಬಗ್ಗೆ ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

![]()
ಇದೇ ವಿಚಾರದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಸಿಡಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ರಮೇಶ್ ಜಾರಕಿಹೊಳಿ ಮಾಡಿರುವ ಆರೋಪಕ್ಕೆ ಸಾಕ್ಷಿ ಕೊಡಲಿ. ಆರೋಪ ಕಾನೂನು ಚೌಕಟ್ಟಿನಲ್ಲಿ ಇದ್ದರೆ ಸಿಬಿಐ ತನಿಖೆ ಮಾಡುತ್ತದೆ. ಅದರ ಬದಲಾಗಿ ಜಾರಕಿಹೊಳಿ ಅಮಿತ್ ಶಾ ಅವರ ಬಳಿ ಏಕೆ ಹೋಗಿದ್ದಾರೆ? ಎಂದು ಪ್ರಶ್ನಿಸಿದರು.
ಸ್ಯಾಂಕಿ ಟ್ಯಾಂಕ್ ರಸ್ತೆ ಫ್ಲೈಓವರ್ ನಿರ್ಮಾಣಕ್ಕೆ ವಿರೋಧ
ಸ್ಯಾಂಕಿ ಟ್ಯಾಂಕ್ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಮೂಲಭೂತ ಸೌಕರ್ಯಗಳ ವಿಚಾರವಾಗಿ
ಬಿಜೆಪಿ ಸರ್ಕಾರಕ್ಕೆ ನಗರದ ಬಗ್ಗೆ ಯಾವುದೇ ಕಾಳಜಿ ಇಲ್ಲ. ಬೆಂಗಳೂರು ನಗರದ 12 ಕ್ಷೇತ್ರಗಳಲ್ಲಿ ಪ್ಲ್ಯಾನಿಂಗ್ ಪ್ರಕಾರ ಮೂಲಭೂತ ಸೌಕರ್ಯಗಳನ್ನು ಮಾಡ್ತಿಲ್ಲ. ಸ್ಯಾಂಕಿ ರಸ್ತೆಯಲ್ಲಿ ಪ್ಲೈಓವರ್ ಮಾಡುವ ಮೊದಲು ಕೆರೆ ಉಳಿಸುವ ಕೆಲಸ ಮಾಡಲಿ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಪ್ಲೈಓವರ್ ಬಗ್ಗೆ ಮುಂದಾಲೋಚನೆ ಸರ್ಕಾರಕ್ಕೆ ಇಲ್ಲ. ಮರಗಳನ್ನು ಕಡಿದು ಫ್ಲೈಓವರ್ ಮಾಡೋದು ಬೇಡ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಕೊಟ್ಟಿರುವ ಸಲಹೆಯನ್ನಾದರೂ ಸರ್ಕಾರ ಪರಿಗಣಿಸಬೇಕು ಎಂದು
ಬಿಕೆ ಹರಿಪ್ರಸಾದ್ ಒತ್ತಾಯಿಸಿದರು.

ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಬಿಜೆಪಿ ಸರ್ಕಾರ ವೈಜ್ಞಾನಿಕ ಕಾಮಗಾರಿ ಮಾಡ್ತಿಲ್ಲ. ಬೆಳಗ್ಗೆ ಫ್ಲೈಓವರ್ ಓಪನ್ ಮಾಡ್ತಾರೆ, ಸಂಜೆ ಬಂದ್ ಮಾಡುತ್ತಾರೆ. ಶಿವಾನಂದ ಸರ್ಕಲ್ ಬಳಿ ಆಗಿದ್ದು ಇದೇ. ಶೇ.40ರಷ್ಟು ಕಮಿಷನ್ ಹೊಡೆಯುವ ಜಾತ್ರೆ ಇದು. ಎಲೆಕ್ಷನ್ ರೋಡ್ ಮಾತ್ರ ಆಗ್ತಾ ಇದೆ. ಅವೈಜ್ಞಾನಿಕ ಯೋಜನೆ ಮಾಡಲು ಹೊರಟಿದ್ದಾರೆ. ಸ್ಯಾಂಕಿ ರಸ್ತೆಯಲ್ಲಿ ಫ್ಲೈಓವರ್ ಮಾಡಲು ಬಹಳ ಜನರ ವಿರೋಧ ಇದೆ. 22 ಸಾವಿರ ನಿವಾಸಿಗಳು ವಿರೋಧ ಮಾಡಿದ್ದಾರೆ. 2 ಸಾವಿರ ಮಕ್ಕಳು ಯೋಜನೆ ವಿರೋಧಿಸಿ ಪತ್ರ ಬರೆದಿದ್ದಾರೆ ಎಂದು ಹೇಳಿದರು.
Former Minister and BJP MLA Ramesh Jarkiholi met Union Home Minister Amit Shah here on Thursday night and requested him to transfer the sex CD case against him to the CBI.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm