ಬ್ರೇಕಿಂಗ್ ನ್ಯೂಸ್
11-02-23 07:45 pm HK News Desk ಕರ್ನಾಟಕ
ತುಮಕೂರು, ಫೆ.11: ಜಿಲ್ಲೆಯ ಚಿಕ್ಕನಾಯಕನಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ.
12 ಗಂಟೆ ಸುಮಾರಿಗೆ ನಡೆದಿರುವ ಅಪಘಾತದಲ್ಲಿ ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ಜೋಡಿಯಾದ ರಘು(35), ಅನುಷಾ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರೂ ಟೆಕ್ಕಿಗಳಾಗಿದ್ದರು.
ಅನುಷಾ ಮತ್ತು ರಘು ಅವರು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿಯಿಂದ ಬಳ್ಳಾರಿ ಕಡೆಗೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಹ್ಯೂಂಡೈ ಕ್ರೆಟಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಳಿಯಾರ್ ಗೇಟ್ ಬಳಿ ಲಾರಿಯೊಂದು ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಘು ಎದುರಿನ ಸೀಟಿನಲ್ಲಿದ್ದರೆ ಅನುಷಾ ಹಿಂಬದಿ ಸೀಟಿನಲ್ಲಿ ಕುಳಿತಿದ್ದರು. ಇಬ್ಬರೂ ಸ್ಥಳದಲ್ಲೇ ಅಸು ನೀಗಿದ್ದಾರೆ. ಅಪಘಾತದಲ್ಲಿ ಭಾಗಿಯಾದ ಲಾರಿ ರಸ್ತೆ ಬಿಟ್ಟು ಹೊರಗೆ ಹೋಗಿ ಮರಕ್ಕೆ ಡಿಕ್ಕಿಯಾಗಿ ನಿಂತಿದೆ.
ಇಬ್ಬರೂ ಟೆಕ್ಕಿಗಳಾಗಿದ್ದರು;
ಹಾಸನ ಜಿಲ್ಲೆ ಅರಸಿಕೆರೆ ಮೂಲದ ರಘು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿ ಮೂಲದ ಅನುಷಾ ಅವರಿಗೆ ಒಂದೂವರೆ ತಿಂಗಳ ಹಿಂದಷ್ಟೆ ಮದುವೆಯಾಗಿತ್ತು.
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ಗಳಾಗಿದ್ದ ಅವರು ಸಂಬಂಧಿಕರ ಮದುವೆಗೆಂದು ಕಾರಿನಲ್ಲಿ ತೆರಳುತ್ತಿದ್ದರು. ದಂಪತಿ.
Tumkur accident, newly married couple die on spot after truck rams car. The deceased have been identified as Raghu and Anusha. Both were techies working in Bangalore. They were on their way to attend a wedding function during which the ghastly accident took place.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm