ಬ್ರೇಕಿಂಗ್ ನ್ಯೂಸ್
12-02-23 03:03 pm HK News Desk ಕರ್ನಾಟಕ
ಬೆಂಗಳೂರು, ಫೆ.12: ಕಾಂತಾರ ಸಿನೆಮಾ ಅನುಕರಿಸಿ ದೈವದ ವೇಷ ಧರಿಸುವುದು, ವೇದಿಕೆ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ದೈವಕ್ಕೆ ಅಪಹಾಸ್ಯ ಮಾಡುವುದು ಹೆಚ್ಚುತ್ತಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನರ್ತಿಸುತ್ತಿದ್ದ ವಿದ್ಯಾರ್ಥಿ ಮೇಲೆ ದೈವ ಆವಾಹನೆ ಆಗಿರುವ ಘಟನೆ ನಡೆದಿದ್ದು ಅಲ್ಲಿದ್ದವರು ಶಾಕ್ ಆಗಿದ್ದಾರೆ.

ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ದ್ವೀತಿಯ ಪಿಯುಸಿ ವಿದ್ಯಾರ್ಥಿ ವಿಶಾಲ್, ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ಕಾಂತಾರ ಸಿನಿಮಾದ ರೀತಿಯಲ್ಲೇ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗುತ್ತಿದ್ದು ವೇದಿಕೆ ಮೇಲಿಂದ ಕೆಳಗೆ ಹಾರಿ ಆವೇಶಕ್ಕೊಳಗಾಗಿದ್ದಾನೆ. ಕೂಡಲೇ ಎಚ್ಚೆತ್ತ ಕಾಲೇಜು ಸಿಬಂದಿ ಹಾಡನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಯನ್ನು ಹಿಡಿದು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಹಾಡು ನಿಲ್ಲಿಸಿದರೂ, ವಿಶಾಲ್ ಆರ್ಭಟ ನೋಡಿದ ಪೋಷಕರು, ಕಾಲೇಜು ಸಿಬಂದಿ ದಂಗಾಗಿದ್ದಾರೆ. ಕಾಂತಾರ ಸಿನಿಮಾ ಬಂದ ಬಳಿಕ ಎಲ್ಲೆಲ್ಲೋ ದೈವದ ವೇಷ ಧರಿಸಿ ಕುಣಿಯುವುದನ್ನು ಮಾಡುತ್ತಾರೆ. ಕಾಲೇಜಿನ ವೇದಿಕೆಗಳಲ್ಲಿ ಭೂತ ನರ್ತನ ಸಾಮಾನ್ಯ ಎನ್ನುವಂತಾಗಿದೆ. ವಿದ್ಯಾರ್ಥಿಯ ಮೈಮೇಲೆ ಆವೇಶ ಬಂದಿರುವುದು ದೈವದ ಬಗ್ಗೆ ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿರಬಹುದು.
College Student possessed by Panjurli Daiva in Bangalore after imitating like kantara
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm