ಬ್ರೇಕಿಂಗ್ ನ್ಯೂಸ್
13-02-23 02:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: "ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಪ್ರದರ್ಶನ, ಕೇವಲ ಪ್ರದರ್ಶನವಲ್ಲ. ಇದು ಭಾರತದ ಶಕ್ತಿಯ ಪ್ರದರ್ಶನವೂ ಹೌದು'' ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಲಾಗಿರುವ 14ನೇ ಏರೋ ಇಂಡಿಯಾ ಪ್ರದರ್ಶನ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಏರ್ ಶೋ ಭಾರತದ ಸಾಮರ್ಥ್ಯ ಸಾಕ್ಷಿ ಆಗಲಿದೆ. ಭಾರತದ ಮೇಲಿನ ವಿಶ್ವದ ವಿಶ್ವಾಸ ಹೆಚ್ಚಾಗುತ್ತಿದೆ. ಬಹುತೇಕ ರಾಷ್ಟ್ರಗಳು ಏರೋ ಇಂಡಿಯಾದಲ್ಲಿ ಭಾಗಿಯಾಗುತ್ತಿವೆ. ದೇಶಗಳ ರಕ್ಷಣಾ ಸಚಿವರು, ವಿಶ್ವದ ಅನೇಕ ರಕ್ಷಣಾ ತಂತ್ರಜ್ಞಾನ ಹಾಗೂ ಪರಿಕರಗಳ ನಿರ್ಮಾತೃ ಕಂಪನಗಿಳ ಸಿಇಒಗಳು ಭಾಗಿಯಾಗಿದ್ದಾರೆ ಎಂದು ತಿಳಿಸಿದರು.
"ಈ ಪ್ರದರ್ಶನದಲ್ಲಿ ಭಾರತದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉತ್ಪಾದನಾ ಕಂಪನಿಗಳು (ಎಂಎಸ್ಎಂಇ) , ಸ್ವದೇಶಿ ಸ್ಟಾರ್ಟ್ ಅಪ್ ಕೂಡಾ ಭಾಗಿಯಾಗುತ್ತಿವೆ. ಭೂಮಿಯಿಂದ ಆಕಾಶದವರೆಗೆ ಬಿಲಿಯನ್ ಅವಕಾಶಗಳ ರನ್ ವೇ ಇದಾಗಿದ್ದು, ಈ ಅವಕಾಶವನ್ನು ವಿಶ್ವದ ಎಲ್ಲಾ ರಕ್ಷಣಾ ಸಾಮಗ್ರಿಗಳ ತಯಾರಿಕಾ ಕಂಪನಿಗಳು ಸದ್ಬಳಕೆ ಮಾಡಿಕೊಳ್ಳಬೇಕು'' ಎಂದು ಅವರು ತಿಳಿಸಿದರು.



"ಏರೋ ಇಂಡಿಯಾವನ್ನು ಅತ್ಯಂತ ಅಚ್ಚುಕಟ್ಟಾಗಿ ಏರ್ ಶೋವನ್ನು ಆಯೋಜಿಸಿರುವುದಕ್ಕೆ ನಾನು ರಕ್ಷಣಾ ಇಲಾಖೆಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದ ಮೋದಿ, ಭಾರತದ ತಂತ್ರಜ್ಞಾನ ವಿಶ್ವದಲ್ಲೇ ಅತ್ಯಾಧುನಿಕವಾಗಿದೆ. ಈ ಏರ್ ಶೋನಲ್ಲಿ ಭಾಗವಹಿಸುವಂತೆ ಕರ್ನಾಟಕದ ಯುವಜನರಿಗೆ ನಾನು ಸ್ವಾಗತ ಕೋರುತ್ತೇನೆ. ಎಲ್ಲರೂ ಈ ರಕ್ಷಣಾ ಕ್ಷೇತ್ರದಲ್ಲಿ ತಂತ್ರಜ್ಞಾನ, ಹೊಸ ಸಂಶೋಧನೆಯಲ್ಲಿ ಭಾಗಿಯಾಗಬೇಕು'' ಎಂದು ಅವರು ತಿಳಿಸಿದರು.




ಭಾರತದಲ್ಲಿ ಅಭಿವೃದ್ಧಿಯಾಗುವ ತಂತ್ರಜ್ಞಾನಗಳ ವಿಶೇಷತೆಗಳನ್ನು ವಿವರಿಸಿದ ಅವರು, “ನಮ್ಮ ತಂತ್ರಜ್ಞಾನ ಕಡಿಮೆ ವೆಚ್ಚದ್ದಾಗಿರುತ್ತದೆ ಜೊತೆಗೆ, ನಂಬಲರ್ಹವಾದ ತಂತ್ರಜ್ಞಾನವೂ ಆಗಿರುತ್ತದೆ.ದೇಶಗಳ ರಕ್ಷಣಾ ಸಚಿವರು, ಸಿಇಒಗಳು ಭಾಗಿಯಾಗಿದ್ದಾರೆ. ಇದರ ಪ್ರಾತ್ಯಕ್ಷತೆಗೆ ಪ್ರಮಾಣತೆಯ ಅಗತ್ಯವಿಲ್ಲ. ಭಾರತದ ತಂತ್ರಜ್ಞಾನದ ಸಾಮರ್ಥ್ಯ ಏನು ಎಂಬುದು ತೇಜಸ್ ಎಂಬ, ಮೇಕ್ ಇನ್ ಇಂಡಿಯಾದಡಿ ಆರಂಭವಾದ ಬಹುಕಾರ್ಯ ನಿರ್ವಹಣೆಯ ಸಾಮರ್ಥ್ಯದ ಯುದ್ಧ ವಿಮಾನವೇ ಸಾಕ್ಷಿ. ಇದನ್ನು ಭಾರತದ ಹೆಮ್ಮೆಯ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ನಿರ್ಮಿಸಿದೆ. ತುಮಕೂರಿನಲ್ಲಿ ಎಚ್ ಎಎಲ್ ನ ಜಗತ್ತಿನ ಅತ್ಯಾಧುನಿಕ ತಂತ್ರಜ್ಞಾನದ ಯುದ್ಧ ವಿಮಾನಗಳನ್ನು ನಿರ್ಮಿಸುವ ದೊಡ್ಡ ಕೇಂದ್ರ ಆರಂಭವಾಗಿದೆ. ಇದೆಲ್ಲವೂ ಆತ್ಮನಿರ್ಭರ ಭಾರತದ ಉದಾಹರಣೆಗಳಷ್ಟೇ'' ಎಂದು ಪ್ರಧಾನಿ ಮೋದಿ ವಿವರಿಸಿದರು.


"ಈಗ ಅವಕಾಶಗಳು ತೆರೆಯುತ್ತಿವೆ. ಎಲ್ಲಾ ಕ್ಷೇತ್ರಗಳಲ್ಲೂ ಕ್ರಾಂತಿ ಆಗುತ್ತಿದೆ. ರಕ್ಷಣಾ ಸಾಮಗ್ರಿಗಳನ್ನು ಹಿಂದೆ ವಿವಿಧ ದೇಶಗಳಿಂದ ತರಿಸಿಕೊಳ್ಳುತ್ತಿದ್ದ ಭಾರತ, ಇಂದು ಅತ್ಯಾಧುನಿಕವಾದ ರಕ್ಷಣಾ ಸಾಮಗ್ರಿಗಳನ್ನು ಸ್ವದೇಶದಲ್ಲೇ ತಯಾರಿಸಿ ಹೊರದೇಶಗಳಿಗೆ ರಫ್ತು ಮಾಡುತ್ತಿದೆ. ಈವರೆಗೆ 12 ಸಾವಿರ ಕೋಟಿ ರೂ.ಗಳಷ್ಟು ರಕ್ಷಣಾ ಸಾಮಗ್ರಿಗಳು ವಿದೇಶಗಳಿಗೆ ಭಾರತದಿಂದ ರಫ್ತಾಗಿದೆ'' ಎಂದು ತಿಳಿಸಿದರು.


"ಭಾರತದ ರಕ್ಷಣಾ ಮಾರುಕಟ್ಟೆ ಬಹಳ ಸೂಕ್ಷ್ಮವಾಗಿದ್ದು, ಇದು ಭಾರತವನ್ನು ವಿಶ್ವದ ದೈತ್ಯ ರಕ್ಷಣಾ ಸಾಮಗ್ರಿಗಳ ನಿರ್ಮಾತೃ ರಾಷ್ಟ್ರಗಳ ಪೈಕಿ ಭಾರತವನ್ನು ನಿಲ್ಲಿಸಲಿರುವ ಲಾಂಚ್ ಪ್ಯಾಡ್ ರೀತಿ ಕೆಲಸ ಮಾಡಲಿದೆ. ಮುಂದೊಂದು ದಿನ, ಅತಿಹೆಚ್ಚು ರಕ್ಷಣಾ ಸಲಕರಣೆಗಳನ್ನು ವಿದೇಶಗಳಿಗೆ ರಫ್ತು ಮಾಡುವ ದೇಶ ಎಂಬ ಹೆಗ್ಗಳಿಕೆ ಭಾರತದ ಪಾಲಾಗಲಿದೆ. ಹಾಗಾಗಿಯೇ, ನಾನು ಭಾರತದ ರಕ್ಷಣಾ ಸಾಮಗ್ರಿಗಳ ತಯಾರಿಕಾ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ವಿಶ್ವದ ಕಂಪನಿಗಳಿಗೆ ಆಹ್ವಾನಿಸುತ್ತೇನೆ. ಹಾಗೆಯೇ, ಭಾರತದ ಖಾಸಗಿ ವಲಯಗಳಿಗೂ ಆಹ್ವಾನಿಸುತ್ತೇನೆ'' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Prime Minister Narendra Modi today inaugurated Asia's largest aero show, Aero India 2023, in Bengaluru. The 14th edition of the event will display indigenous equipment and technologies to forge partnerships with foreign companies.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm