ಬ್ರೇಕಿಂಗ್ ನ್ಯೂಸ್
14-02-23 04:30 pm HK News Desk ಕರ್ನಾಟಕ
ತುಮಕೂರು, ಫೆ.14 : ಅನುಮಾನಾಸ್ಪದ ರೀತಿಯಲ್ಲಿ ಹುಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅಂಕಸಂದ್ರ ಮೀಸಲು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹುಲಿ ಸಾವನ್ನಪ್ಪಿರುವುದು ಪತ್ತೆಯಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ ಹುಲಿಯ ಸುಳಿವು ಇರಲಿಲ್ಲ. ಇದೀಗ ಹುಲಿಯ ಮೃತ ದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.
ಇಂದು ಮುಂಜಾನೆ ಚಿಕ್ಕಹೆಗಡೇಹಳ್ಳಿ ಗ್ರಾಮದ ವಾಸಿಯೊಬ್ಬರು ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಹುಲಿ ಸಾವನಪ್ಪಿರುವುದು ಗೊತ್ತಾಗಿದೆ. ಕೂಡಲೇ ಸ್ಥಳೀಯರು ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹುಲಿಯನ್ನು ಪರಿಶೀಲಿಸಿದ್ದಾರೆ. ಹುಲಿಯ ಮೈ ಮೇಲೆ ಯಾವುದೇ ಗಾಯ ಅಥವಾ ಹೊಡೆತ ಬಿದ್ದಿರುವ ಗುರುತುಗಳು ಪತ್ತೆಯಾಗಿಲ್ಲ. ಹೀಗಾಗಿ ಹುಲಿ ಸಾವಿನ ರಹಸ್ಯ ಭೇದಿಸಲು ತನಿಖೆ ಮುಂದುವರೆಸಿದ್ದಾರೆ.
ಭದ್ರಾ ಅಭಯಾರಣ್ಯದಿಂದ ವೈದ್ಯ ತಂಡ ಆಗಮಿಸುತ್ತಿದ್ದು, ಹುಲಿ ದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಇನ್ನು, ಚೇಳೂರು ಪೊಲೀಸರು ಹಾಗೂ ಶಿರಾ ಡಿವೈಎಸ್ಪಿ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
The incident in which a tiger died in a suspicious manner took place in Anksandra reserve forest area of Gubbi taluk of Tumkur district. This is the first time that a tiger has been found dead in Tumkur district, till now there was no trace of a tiger in the district. Now the discovery of the dead body of the tiger has given rise to many doubts.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm