ಬ್ರೇಕಿಂಗ್ ನ್ಯೂಸ್
15-02-23 09:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15 : ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ವಿರುದ್ಧ ಬೆಂಗಳೂರಿನ ಕೋರ್ಟ್ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನ ವಾರಂಟ್ ಜಾರಿಗೊಳಿಸಿದೆ.
ಸಿ.ಎಸ್.ಸೋಮೇಗೌಡ ಎನ್ನುವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್, ವೈಎಸ್ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಕೋರ್ಟ್ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಅವರು ಮಾರ್ಚ್ 27ಕ್ಕೆ ದತ್ತಾ ಅವರನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದ್ದಾರೆ.
ಉದ್ಯಮಿ ಸಿ.ಎಸ್. ಸೋಮೇಗೌಡರಿಗೆ ದತ್ತಾ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಸಾಲ ಪಡೆದಿದ್ದ ದತ್ತಾ ಅದಕ್ಕೆ ಬದಲಾಗಿ ಚೆಕ್ ನೀಡಿದ್ದರು. ಆದರೆ ಅದು ಅನೂರ್ಜಿತವಾಗಿದ್ದು ದತ್ತಾ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದರಿಂದ ದತ್ತಾ ಕೋರ್ಟ್ ಗೆ ಹಾಜರಾಗುವುದು ಅನಿವಾರ್ಯವಾಗುತ್ತದೆ. ಜೆಡಿಎಸ್ ವಕ್ತಾರರಾಗಿ ಕಾರ್ಯ ನಿರ್ವಹಿಸಿದ್ದ ದತ್ತಾ, ಜೆಡಿಎಸ್ ವರಿಷ್ಠ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ, ಇತ್ತೀಚೆಗೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದು, ಕಡೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ದತ್ತಾ ಸರಳ, ಸಜ್ಜನ ರಾಜಕಾರಣಿ ಎಂದೇ ಹೆಸರು ಪಡೆದುಕೊಂಡಿದ್ದಾರೆ.
Special court issues arrest warrant against YSV Datta in cheque bounce case.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm