ಬ್ರೇಕಿಂಗ್ ನ್ಯೂಸ್
17-02-23 08:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.17 : ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆಗೆ ಬರುವ ಮೊದಲೇ ಸದನಕ್ಕೆ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಟುಕೊಂಡು ಸದನ ಆಗಮಿಸಿದ್ದರು. ಕೇಸರಿ ಬಣ್ಣದ ಹೂವುಗಳನ್ನು ಇಟ್ಟುಕೊಂಡು ಡಿಕೆ ಶಿವಕುಮಾರ್ ಸದನಕ್ಕೆ ಪ್ರವೇಶ ಮಾಡುತ್ತಲೇ ಎಲ್ಲರ ಆಕರ್ಷಣೆಗೆ ಕಾರಣವಾದರು. ಮಾಜಿ ಸಿಎಂ ಸಿದ್ಧರಾಮಯ್ಯ ಅವರೂ ಕಿವಿ ಮೇಲೆ ಹೂವು ಇಟ್ಟುಕೊಂಡು ಬಂದಿದ್ದರು. ಇದೇ ವಿಚಾರ ಸದನದಲ್ಲಿ ಬಜೆಟ್ ಮಂಡನೆ ಆಗುವ ಮೊದಲೇ ಗದ್ದಲಕ್ಕೆ ಕಾರಣವಾಯ್ತು.
ಸಿಎಂ ಬೊಮ್ಮಾಯಿ ಈ ಬಗ್ಗೆ ಪ್ರತಿಕ್ರಿಯಿಸಿ, ಇಷ್ಟು ದಿನ ಕಾಂಗ್ರೆಸ್ ನಾಯಕರು ಜನರ ಕಿವಿ ಮೇಲೆ ಹೂ ಇಟ್ಟಿದ್ದರು. ಈಗ ಅವರೇ ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದಾರೆ. ಮುಂದೆ ಜನರೇ ಇವರ ಕಿವಿ ಮೇಲೆ ಹೂ ಇಡುತ್ತಾರೆ ಎಂದು ಛೇಡಿಸಿದರು. ಬೊಮ್ಮಾಯಿ ಮಾತಿಗೆ ಗರಂ ಆದ ಸಿದ್ದರಾಮಯ್ಯ, ನೀವು ಜನರ ಕಿವಿ ಮೇಲೆ ಹೂವಿಡುತ್ತಿದ್ದೀರಿ. ಈ ಬಜೆಟ್ ಮೂಲಕ 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದಾರೆ ಎಂದು ತಿಳಿಸಲು ನಾವು ಹೂ ಇಟ್ಟುಕೊಂಡು ಬಂದಿದ್ದೇವೆ ಎಂದು ಸರ್ಕಾರದ ವಿರುದ್ಧ ಸಿಟ್ಟು ಹೊರ ಹಾಕಿದರು.



ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಭಾರೀ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದರಿಂದ ಬಜೆಟ್ ಮಂಡನೆಗೂ ಮೊದಲೇ ಗದ್ದಲ ಉಂಟಾಯಿತು. ಈ ಸಂದರ್ಭದಲ್ಲಿ ಸ್ಪೀಕರ್ ಕಾಗೇರಿ, ಇಷ್ಟು ದಿನ ಸಿದ್ದರಾಮಯ್ಯ ಕೇಸರಿ ಬಣ್ಣ ನಿಮ್ಮ ಪಕ್ಷದ್ದು ಎನ್ನುತ್ತಿದ್ದರು. ಆದರೆ ಇಂದು ಕೇಸರಿ ಬಣ್ಣದ ಹೂ ಇಟ್ಟುಕೊಂಡು ಬಂದಿದ್ದಾರೆ ಎಂದು ಹೇಳಿ ಕಾಲೆಳೆದರು. ಕೊನೆಗೆ ಸ್ಪೀಕರ್ ಎರಡೂ ಕಡೆಯ ಸದಸ್ಯರನ್ನು ಸಮಾಧಾನ ಪಡಿಸಿ ಬಜೆಟ್ ಮಂಡನೆಗೆ ಅವಕಾಶ ಕಲ್ಪಿಸಿದರು.
In a peculiar protest against the ruling Bharatiya Janata Party in Karnataka, Opposition leader Siddaramaiah and other Congress leaders came to the state Assembly wearing flowers behind their ears, alleging that the BJP government has cheated people and made them fools by not fulfilling promises from the previous budget and the 2018 manifesto. Chief Minister Basvaraj Bommai, who also holds the finance portfolio, is today presenting his second, and his government's last, budget before the upcoming state elections, scheduled for May this year.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm