ಬ್ರೇಕಿಂಗ್ ನ್ಯೂಸ್
18-02-23 10:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.18 : ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿಯೇ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಆದರೆ ಕೋಲಾರದಲ್ಲಿ ಪಕ್ಷದ ನಾಯಕರ ಬಣ ಜಗಳದಿಂದಾಗಿ ಮತ್ತೆ ವಿಚಲಿತರಾಗಿದ್ದಾರೆ ಎನ್ನುವ ಸುದ್ದಿಗಳಿವೆ. ಹೀಗಾಗಿ ಮತ್ತೆ ಸುರಕ್ಷಿತ ಕ್ಷೇತ್ರದ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನುವ ವದಂತಿ ಹರಡಿದೆ.
ಕೋಲಾರ ಕಾಂಗ್ರೆಸ್ ನಲ್ಲಿ ರಮೇಶ್ ಕುಮಾರ್ ಮತ್ತು ಮುನಿಯಪ್ಪ ಬಣದ ನಡುವಿನ ಮುನಿಸು ತಣ್ಣಗಾಗದ್ದರಿಂದ ಸಿದ್ದರಾಮಯ್ಯ ಬೆಂಬಲಿಗರು ಅಲ್ಲಿನ ಉಸಾಬರಿ ಬೇಡವೆಂದು ಮತ್ತೊಂದು ಸುರಕ್ಷಿತ ಕ್ಷೇತ್ರವನ್ನು ಹುಡುಕಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ಕ್ಷೇತ್ರದಿಂದ ಸಿದ್ದರಾಮಯ್ಯ ಅವರನ್ನು ಸ್ಪರ್ಧೆಗಿಳಿಸಲು ಕಸರತ್ತು ನಡೆಸಿದ್ದಾರೆ ಎಂಬ ಬಗ್ಗೆ ಭಾರೀ ಚರ್ಚೆ ಆರಂಭಗೊಂಡಿದೆ. ಸಿದ್ದರಾಮಯ್ಯ ಓಕೆ ಅಂದಲ್ಲಿ ರೆಡ್ ಕಾರ್ಪೆಟ್ ಹಾಸಿ ಸ್ವಾಗತಿಸಲು ಕೊಪ್ಪಳ ಜಿಲ್ಲೆಯ ನಾಯಕರು ರೆಡಿ ಮಾಡ್ಕೊಂಡಿದ್ದಾರೆ ಎನ್ನಲಾಗುತ್ತಿದೆ.
ಕುಷ್ಟಗಿ ವಿಧಾನಸಭೆ ಕ್ಷೇತ್ರದಲ್ಲಿ ಕುರುಬ ಸಮುದಾಯದ ಮತಗಳು ನಿರ್ಣಾಯಕವಾಗಿರುವುದೇ ಸಿದ್ದರಾಮಯ್ಯ ಅವರಿಗೆ ಪ್ಲಸ್ ಪಾಯಿಂಟ್. ಈ ಹಿಂದೆ ಇಲ್ಲಿ ಸ್ಪರ್ಧಿಸಿದ್ದ ಅಮರೇಗೌಡ ಬಯ್ಯಾಪುರ ಬದಲಿಗೆ ಸಿದ್ದರಾಮಯ್ಯ ಅವರನ್ನು ಚುನಾವಣಾ ಕಣಕ್ಕೆ ತರಲು ತೆರಮರೆಯಲ್ಲಿ ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ. ಸಿದ್ದರಾಮಯ್ಯ ಸ್ಪರ್ಧಿಸಲು ಒಪ್ಪಿದರೆ ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ ಅಮರೇಗೌಡ ಬಯ್ಯಾಪುರ ಸ್ಥಾನ ಬಿಟ್ಟು ಕೊಡಬೇಕಾಗುತ್ತದೆ. ಆದರೆ ಕುಷ್ಟಗಿಯಲ್ಲಿ ಸತತ ಎರಡನೇ ಬಾರಿ ಯಾವುದೇ ಶಾಸಕ ಗೆದ್ದಿರುವ ಇತಿಹಾಸ ಇಲ್ಲ. ಈ ನೆಲೆಯಲ್ಲಿ ನೋಡಿದರೆ ಕಾಂಗ್ರೆಸ್ ಶಾಸಕ ಅಮರೇಗೌಡ ಅವರು ಮತ್ತೆ ಗೆಲ್ಲುತ್ತಾರಾ ಅನ್ನುವ ಶಂಕೆ ಇರುವಾಗಲೇ ಸಿದ್ದರಾಮಯ್ಯ ಬೆಂಬಲಿಗರು ಹೊಸ ವರಸೆ ಆರಂಭಿಸಿದ್ದಾರೆ.
ಇದೇ ವೇಳೆ, ಸಿದ್ದರಾಮಯ್ಯ ಸ್ಪರ್ಧೆ ಖಚಿತವಾದ್ರೆ ಬಿಜೆಪಿ ನಾಯಕರು ಪ್ರಭಾವಿ ವ್ಯಕ್ತಿಯನ್ನೇ ಇಲ್ಲಿ ಕಣಕ್ಕಿಳಿಸುವ ಸಾಧ್ಯತೆ ಇದೆ. ಹಾಗಾದಲ್ಲಿ ಇಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ದೊಡ್ಡನಗೌಡ ಪಾಟೀಲ್ ಗೆ ಟಿಕೆಟ್ ಕೈತಪ್ಪಲಿದೆ. ಸಿದ್ದರಾಮಯ್ಯ ಸೋಲಿಸಿಯೇ ಸಿದ್ಧ ಎನ್ನುತ್ತಿರುವ ಬಿಜೆಪಿ ನಾಯಕರು ಮತ್ತೆ ರಾಮುಲು ಅವರನ್ನೇ ಸ್ಪರ್ಧೆಗೆ ಇಳಿಸುವ ಸಾಧ್ಯತೆಯಿದೆ. ಮೈಸೂರಿನ ವರುಣಾ ಬಳಿಕ ಕಳೆದ ಬಾರಿ ಬಾದಾಮಿ, ಈ ಬಾರಿ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡ್ತಾರೆ ಎಂಬ ಮಾತುಗಳಿದ್ದವು. ಆದರೆ ಈಗ ಕುಷ್ಟಗಿ ಕ್ಷೇತ್ರದತ್ತ ಸಿದ್ದರಾಮಯ್ಯ ಚಿತ್ತ ಹರಿಸಿದ್ದಾರೆಯೇ ಎಂಬ ವದಂತಿ ಹರಡಿದೆ.
Siddaramaiah plans to contest from kustagi.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm